<p><strong>ಬೀದರ್</strong>: ನಗರದಲ್ಲಿ ಭಾನುವಾರ ಬೆಳಿಗ್ಗೆ 'ರನ್ ಫಾರ್ ಫಿಟ್ ನೆಸ್' ಮ್ಯಾರಾಥಾನ್ ನಡೆಯಿತು.</p><p>ಬೀದರ್ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್.ಬಿ.ಐ) ಸಹಯೋಗದಲ್ಲಿ ಏರ್ಪಡಿಸಿದ್ದ ಮ್ಯಾರಾಥಾನ್ ನಲ್ಲಿ ಅಪಾರ ಸಂಖ್ಯೆಯ ಜನ ಭಾಗವಹಿಸಿ ಉತ್ಸಾಹದಿಂದ ಹೆಜ್ಜೆ ಹಾಕಿದರು.</p><p>ನಗರದ ಸಿದ್ದಾರೂಢ ಮಠದಿಂದ ಆರಂಭಗೊಂಡ ಮ್ಯಾರಾಥಾನ್, ಕುಂಬಾರವಾಡ ಕ್ರಾಸ್, ಮೈಲೂರ ಕ್ರಾಸ್, ರಾಮ ಚೌಕ್, ಬೊಮ್ಮಗೊಂಡೇಶ್ವರ ವೃತ್ತ, ಮಹಾವೀರ ವೃತ್ತ, ಶಿವಾಜಿ ವೃತ್ತ, ರೋಟರಿ ವೃತ್ತ, ಮಡಿವಾಳೇಶ್ವರ ವೃತ್ತದ ಮೂಲಕ ಹಾದು ಶಿವನಗರ ವಾಕಿಂಗ್ ಪಾಥ್ ಬಳಿ ಕೊನೆಗೊಂಡಿತು.</p><p>ಇದಕ್ಕೂ ಮುನ್ನ ಮ್ಯಾರಾಥಾನ್ ಗೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ನಶೆಮುಕ್ತ ಸಮಾಜ, ಸೈಬರ್ ಅಪರಾಧದ ಬಗ್ಗೆ ಜಾಗೃತಿ ಮೂಡಿಸಲು ಈ ಮ್ಯಾರಾಥಾನ್ ಹಮ್ಮಿಕೊಳ್ಳಲಾಗಿದೆ ಎಂದರು.</p><p>ಎಸ್.ಬಿ.ಐ. ಪ್ರಾದೇಶಿಕ ವ್ಯವಸ್ಥಾಪಕ ನಾಗರಾಜ್ ಮಾತನಾಡಿ, ಮಾನಸಿಕ,ದೈಹಿಕವಾಗಿಮನುಷ್ಯ ಸದೃಢರಾಗಿರುವುದು ಬಹಳ ಮುಖ್ಯ. ಆದಕಾರಣ ನಿತ್ಯ ಬೆಳಿಗ್ಗೆ ಯೋಗ, ವಾಕ್, ಏರೋಬಿಕ್ಸ್ ಮಾಡಬೇಕು. ಪೊಲೀಸರು, ಸೈನಿಕರಂತೆ ಶಿಸ್ತು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.</p><p>ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ನಗರದಲ್ಲಿ ಭಾನುವಾರ ಬೆಳಿಗ್ಗೆ 'ರನ್ ಫಾರ್ ಫಿಟ್ ನೆಸ್' ಮ್ಯಾರಾಥಾನ್ ನಡೆಯಿತು.</p><p>ಬೀದರ್ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್.ಬಿ.ಐ) ಸಹಯೋಗದಲ್ಲಿ ಏರ್ಪಡಿಸಿದ್ದ ಮ್ಯಾರಾಥಾನ್ ನಲ್ಲಿ ಅಪಾರ ಸಂಖ್ಯೆಯ ಜನ ಭಾಗವಹಿಸಿ ಉತ್ಸಾಹದಿಂದ ಹೆಜ್ಜೆ ಹಾಕಿದರು.</p><p>ನಗರದ ಸಿದ್ದಾರೂಢ ಮಠದಿಂದ ಆರಂಭಗೊಂಡ ಮ್ಯಾರಾಥಾನ್, ಕುಂಬಾರವಾಡ ಕ್ರಾಸ್, ಮೈಲೂರ ಕ್ರಾಸ್, ರಾಮ ಚೌಕ್, ಬೊಮ್ಮಗೊಂಡೇಶ್ವರ ವೃತ್ತ, ಮಹಾವೀರ ವೃತ್ತ, ಶಿವಾಜಿ ವೃತ್ತ, ರೋಟರಿ ವೃತ್ತ, ಮಡಿವಾಳೇಶ್ವರ ವೃತ್ತದ ಮೂಲಕ ಹಾದು ಶಿವನಗರ ವಾಕಿಂಗ್ ಪಾಥ್ ಬಳಿ ಕೊನೆಗೊಂಡಿತು.</p><p>ಇದಕ್ಕೂ ಮುನ್ನ ಮ್ಯಾರಾಥಾನ್ ಗೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ನಶೆಮುಕ್ತ ಸಮಾಜ, ಸೈಬರ್ ಅಪರಾಧದ ಬಗ್ಗೆ ಜಾಗೃತಿ ಮೂಡಿಸಲು ಈ ಮ್ಯಾರಾಥಾನ್ ಹಮ್ಮಿಕೊಳ್ಳಲಾಗಿದೆ ಎಂದರು.</p><p>ಎಸ್.ಬಿ.ಐ. ಪ್ರಾದೇಶಿಕ ವ್ಯವಸ್ಥಾಪಕ ನಾಗರಾಜ್ ಮಾತನಾಡಿ, ಮಾನಸಿಕ,ದೈಹಿಕವಾಗಿಮನುಷ್ಯ ಸದೃಢರಾಗಿರುವುದು ಬಹಳ ಮುಖ್ಯ. ಆದಕಾರಣ ನಿತ್ಯ ಬೆಳಿಗ್ಗೆ ಯೋಗ, ವಾಕ್, ಏರೋಬಿಕ್ಸ್ ಮಾಡಬೇಕು. ಪೊಲೀಸರು, ಸೈನಿಕರಂತೆ ಶಿಸ್ತು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.</p><p>ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>