ಚಿಟಗುಪ್ಪ: ಸಮೀಪದ ಸಿಂಧೋಲ ತಾಂಡಾ ನಿವಾಸಿ ಶಾಂತಾಬಾಯಿ ಅರ್ಜುನ ಇವರಿಗೆ 108 ಆಂಬುಲೆನ್ಸ್ ನಲ್ಲಿ ಸುರಕ್ಷಿತ ಹೆರಿಗೆ ಮಾಡಿಸಲಾಗಿದೆ.
ಹೆರಿಗೆ ಬಳಿಕ ತಾಯಿ ಮತ್ತು ಮಗು ಆರೋಗ್ಯದಿಂದ ಇದ್ದಾರೆ. ಬಗದಲ್ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.
ಹೆರಿಗೆ ನೋವು ಕಂಡ ತಕ್ಷಣ ಮನ್ನಾಏಖ್ಖಳಿ ಆಸ್ಪತ್ರೆಯಿಂದ 108 ಆಂಬುಲೆನ್ಸ್ನಲ್ಲಿ ಬೀದರ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಹೆರಿಗೆ ನೋವು ಮತ್ತಷ್ಟು ಹೆಚ್ಚಿತು. ಆಗ ವೈದ್ಯಕೀಯ ಸಿಬ್ಬಂದಿ ವಿದ್ಯಾಸಾಗರ್, ಚಾಲಕ ಬಾಬುಮಿಯಾ ಗೌತಮ್ ಪತಂಗೆ ರಸ್ತೆ ಪಕ್ಕದಲ್ಲಿ ಆಂಬುಲೆನ್ಸ್ ನಿಲ್ಲಿಸಿ, ಪ್ರಸವ ಕ್ರಿಯೆಯನ್ನು ಪೂರ್ಣಗೊಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.