<p><strong>ಬಸವಕಲ್ಯಾಣ (ಬೀದರ್ ಜಿಲ್ಲೆ):</strong> ಶಾಸಕ ಶರಣು ಸಲಗರ ಸಾಲವಾಗಿ ಪಡೆದ ₹99 ಲಕ್ಷ ಹಿಂದಿರುಗಿಸದೆ ಮೋಸ ಮಾಡಿರುವ ಸಂಬಂಧ ನಗರದ ವ್ಯಾಪಾರಿ ಸಂಜೀವಕುಮಾರ ಸುಗೂರೆ ನೀಡಿರುವ ದೂರಿನ ಮೇರೆಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>ಬೆಂಗಳೂರಿನ ಎಸಿಜೆಎಂ ನ್ಯಾಯಾಧೀಶ ಕೆ.ಎನ್.ಶಿವಕುಮಾರ ಅವರ ಸೂಚನೆಯ ಮೇರೆಗೆ ಪ್ರಕರಣ ದಾಖಲಾಗಿದೆ. ಅವರ ಮೂಲಕವೇ ದೂರು ಮತ್ತು ಪೆನ್ ಡ್ರೈವ್ ರಜಿಸ್ಟರ್ ಪೋಸ್ಟ್ ಮೂಲಕ ಶನಿವಾರ ಠಾಣೆಗೆ ಬಂದಿದೆ.</p><p>ಶರಣು ಸಲಗರ ಅವರ ಸಂಬಂಧಿ ಹಾಗೂ ಆಪ್ತರಾಗಿದ್ದ ಸಂಜೀವಕುಮಾರ ಅವರು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ₹99 ಲಕ್ಷ ಹಣ ನೀಡಿದ್ದರು. ಇದಕ್ಕೂ ಮೊದಲು ಕೆಲ ಸಲ ಪಡೆದಿದ್ದ ಹಣ ವಾಪಸ್ಸು ನೀಡಿದ್ದರಿಂದ ನಂಬಿಕೆಯ ಆಧಾರದ ಮೇಲೆ ಈ ಹಣ ನೀಡಲಾಗಿತ್ತು. ಆದರೆ ನಂತರದಲ್ಲಿ ಈ ಹಣ ಹಿಂದಿರುಗಿಸುವುದಕ್ಕೆ ಇವರು ವಿಳಂಬ ಮಾಡಿದರು.</p><p>ಹೀಗಾಗಿ ಸಂಶಯ ಬಂದಿದ್ದರಿಂದ ಕೆಲ ಹಿರಿಯರ ಸಮ್ಮುಖದಲ್ಲಿ ಸಭೆ ನಡೆಸಿ ಈ ಬಗ್ಗೆ ವಿಚಾರಿಸಲಾಯಿತು. ಆಗ ಶರಣು ಸಲಗರ ಅವರು ಚೆಕ್ ನೀಡಿದ್ದರು. ಆದರೆ ಅದು ಬ್ಯಾಂಕ್ ನಲ್ಲಿನ ಖಾತೆ ಬಂದ್ ಆಗಿದ್ದರಿಂದ ಬೌನ್ಸ್ ಆಗಿದೆ. ಈ ಬಗ್ಗೆ ವಿಚಾರಿಸುವುದಕ್ಕೆ ಶಾಸಕರ ಮನೆಗೆ ಹೋಗಿದ್ದ ಪತ್ನಿ ಮತ್ತು ಪುತ್ರನಿಗೆ ಮೋಸ ಮಾಡುವ ದುರುದ್ದೇಶದಿಂದ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಸಂಜೀವಕುಮಾರ ಅವರ ದೂರಿನಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ (ಬೀದರ್ ಜಿಲ್ಲೆ):</strong> ಶಾಸಕ ಶರಣು ಸಲಗರ ಸಾಲವಾಗಿ ಪಡೆದ ₹99 ಲಕ್ಷ ಹಿಂದಿರುಗಿಸದೆ ಮೋಸ ಮಾಡಿರುವ ಸಂಬಂಧ ನಗರದ ವ್ಯಾಪಾರಿ ಸಂಜೀವಕುಮಾರ ಸುಗೂರೆ ನೀಡಿರುವ ದೂರಿನ ಮೇರೆಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>ಬೆಂಗಳೂರಿನ ಎಸಿಜೆಎಂ ನ್ಯಾಯಾಧೀಶ ಕೆ.ಎನ್.ಶಿವಕುಮಾರ ಅವರ ಸೂಚನೆಯ ಮೇರೆಗೆ ಪ್ರಕರಣ ದಾಖಲಾಗಿದೆ. ಅವರ ಮೂಲಕವೇ ದೂರು ಮತ್ತು ಪೆನ್ ಡ್ರೈವ್ ರಜಿಸ್ಟರ್ ಪೋಸ್ಟ್ ಮೂಲಕ ಶನಿವಾರ ಠಾಣೆಗೆ ಬಂದಿದೆ.</p><p>ಶರಣು ಸಲಗರ ಅವರ ಸಂಬಂಧಿ ಹಾಗೂ ಆಪ್ತರಾಗಿದ್ದ ಸಂಜೀವಕುಮಾರ ಅವರು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ₹99 ಲಕ್ಷ ಹಣ ನೀಡಿದ್ದರು. ಇದಕ್ಕೂ ಮೊದಲು ಕೆಲ ಸಲ ಪಡೆದಿದ್ದ ಹಣ ವಾಪಸ್ಸು ನೀಡಿದ್ದರಿಂದ ನಂಬಿಕೆಯ ಆಧಾರದ ಮೇಲೆ ಈ ಹಣ ನೀಡಲಾಗಿತ್ತು. ಆದರೆ ನಂತರದಲ್ಲಿ ಈ ಹಣ ಹಿಂದಿರುಗಿಸುವುದಕ್ಕೆ ಇವರು ವಿಳಂಬ ಮಾಡಿದರು.</p><p>ಹೀಗಾಗಿ ಸಂಶಯ ಬಂದಿದ್ದರಿಂದ ಕೆಲ ಹಿರಿಯರ ಸಮ್ಮುಖದಲ್ಲಿ ಸಭೆ ನಡೆಸಿ ಈ ಬಗ್ಗೆ ವಿಚಾರಿಸಲಾಯಿತು. ಆಗ ಶರಣು ಸಲಗರ ಅವರು ಚೆಕ್ ನೀಡಿದ್ದರು. ಆದರೆ ಅದು ಬ್ಯಾಂಕ್ ನಲ್ಲಿನ ಖಾತೆ ಬಂದ್ ಆಗಿದ್ದರಿಂದ ಬೌನ್ಸ್ ಆಗಿದೆ. ಈ ಬಗ್ಗೆ ವಿಚಾರಿಸುವುದಕ್ಕೆ ಶಾಸಕರ ಮನೆಗೆ ಹೋಗಿದ್ದ ಪತ್ನಿ ಮತ್ತು ಪುತ್ರನಿಗೆ ಮೋಸ ಮಾಡುವ ದುರುದ್ದೇಶದಿಂದ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಸಂಜೀವಕುಮಾರ ಅವರ ದೂರಿನಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>