<p><strong>ಬೀದರ್:</strong> ಬಸವಕಲ್ಯಾಣ ಬಸವ ಮಹಾಮನೆ ಟ್ರಸ್ಟ್ನಿಂದ ಜನವರಿ 7ರಂದು ಸಮಾನತಾ ಸಮಾವೇಶ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಬೆಲ್ದಾಳ ಸಿದ್ದರಾಮ ಶರಣರು ತಿಳಿಸಿದರು.</p>.<p>ನಗರದಲ್ಲಿ ಭಾನುವಾರ ನಡೆದ ಸಮಾವೇಶದ ಪೂರ್ವಸಿದ್ಧತಾ ಸಭೆಯ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಪ್ರಸ್ತುತ ಸಮಾಜದಲ್ಲಿ ವರ್ಗ, ಜಾತಿ, ಧರ್ಮದ ಗೋಡೆಗಳನ್ನು ದಾಟಿ ಸಮಾನತೆ ತತ್ವದಿಂದ ನಡೆದು ಸಾಮರಸ್ಯದಿಂದ ಎಲ್ಲರೂ ಕೂಡಿ ಇದ್ದಾಗ ದೇಶ ಬಲಿಷ್ಠವಾಗುತ್ತದೆ. ಸಮಾಜ ಶಾಂತಿಯ ತೋಟವಾಗಲು ಸಾಧ್ಯ. ಆ ನಿಟ್ಟಿನಲ್ಲಿ ಸಮಾನತಾ ಸಮಾವೇಶ ಪೂರಕವಾಗಲಿದೆ ಎಂದು ಹೇಳಿದರು.</p>.<p>ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಮಾತನಾಡಿ, ಜ.7ರಂದು ಬಸವಕಲ್ಯಾಣದಲ್ಲಿ ಸಮಾನತಾ ಸಮಾವೇಶ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಜಾತ್ಯತೀತ, ಧರ್ಮಾತೀತ, ಪಕ್ಷಾತೀತವಾಗಿ ಶುದ್ಧ ರಾಜಕೀಯೇತರ ತಳಹದಿಯ ಮೇಲೆ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ ಎಂದು ಅದರ ಉದ್ದೇಶ ವಿವರಿಸಿದರು.</p>.<p>ಮುಖಂಡ ಶ್ರೀಕಾಂತ ಸ್ವಾಮಿ ಮಾತನಾಡಿ, ಸಮಾನತಾ ಸಮಾವೇಶಕ್ಕೆ ನಾಡಿನ ಪೂಜ್ಯರು, ಜನಪ್ರತಿನಿಧಿಗಳು ಹಾಗೂ ಗಣ್ಯರನ್ನು ಆಹ್ವಾನಿಸಲಾಗುವುದು ಎಂದರು.</p>.<p>ಕಲ್ಯಾಣ ಕರ್ನಾಟಕ ಭಾಗದ ಹೋರಾಟಗಾರ ಲಕ್ಷ್ಮಣ ದಸ್ತಿ ಮಾತನಾಡಿಮ ಬೃಹತ್ ಪ್ರಮಾಣದಲ್ಲಿ ಹಮ್ಮಿಕೊಂಡಿರುವ ಸಮಾನತಾ ಸಮಾವೇಶ ಕಾರ್ಯಕ್ರಮದ ಯಶಸ್ವಿಗೆ ಬೀದರ್, ಕಲಬುರಗಿ ಭಾಗದ ಕ್ರಿಯಾಶೀಲ ನಾಯಕರ ಸಾಮಾಜಿಕ ಕಾರ್ಯಕರ್ತರ ಉಪಸಮಿತಿಗಳನ್ನು ರಚಿಸಲಾಗುವುದು ಎಂದು ತಿಳಿಸಿದರು.</p>.<p>ಸಭೆಯಲ್ಲಿ ಶಾಹೀನ್ ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಅಬ್ದುಲ್ ಖದೀರ್, ಪ್ರಮುಖರಾದ ವಿನಯ್ ಮಾಳಗೆ, ಚಂದ್ರಶೇಖರ ಪಾಟೀಲ, ಶಿವಶಂಕರ ಟೋಕರೆ, ಮಹಾಲಿಂಗ, ಕೇದಾರನಾಥ ಪಾಟೀಲ, ರೋಹನ್, ಉದಯಕುಮಾರ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಬಸವಕಲ್ಯಾಣ ಬಸವ ಮಹಾಮನೆ ಟ್ರಸ್ಟ್ನಿಂದ ಜನವರಿ 7ರಂದು ಸಮಾನತಾ ಸಮಾವೇಶ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಬೆಲ್ದಾಳ ಸಿದ್ದರಾಮ ಶರಣರು ತಿಳಿಸಿದರು.</p>.<p>ನಗರದಲ್ಲಿ ಭಾನುವಾರ ನಡೆದ ಸಮಾವೇಶದ ಪೂರ್ವಸಿದ್ಧತಾ ಸಭೆಯ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಪ್ರಸ್ತುತ ಸಮಾಜದಲ್ಲಿ ವರ್ಗ, ಜಾತಿ, ಧರ್ಮದ ಗೋಡೆಗಳನ್ನು ದಾಟಿ ಸಮಾನತೆ ತತ್ವದಿಂದ ನಡೆದು ಸಾಮರಸ್ಯದಿಂದ ಎಲ್ಲರೂ ಕೂಡಿ ಇದ್ದಾಗ ದೇಶ ಬಲಿಷ್ಠವಾಗುತ್ತದೆ. ಸಮಾಜ ಶಾಂತಿಯ ತೋಟವಾಗಲು ಸಾಧ್ಯ. ಆ ನಿಟ್ಟಿನಲ್ಲಿ ಸಮಾನತಾ ಸಮಾವೇಶ ಪೂರಕವಾಗಲಿದೆ ಎಂದು ಹೇಳಿದರು.</p>.<p>ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಮಾತನಾಡಿ, ಜ.7ರಂದು ಬಸವಕಲ್ಯಾಣದಲ್ಲಿ ಸಮಾನತಾ ಸಮಾವೇಶ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಜಾತ್ಯತೀತ, ಧರ್ಮಾತೀತ, ಪಕ್ಷಾತೀತವಾಗಿ ಶುದ್ಧ ರಾಜಕೀಯೇತರ ತಳಹದಿಯ ಮೇಲೆ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ ಎಂದು ಅದರ ಉದ್ದೇಶ ವಿವರಿಸಿದರು.</p>.<p>ಮುಖಂಡ ಶ್ರೀಕಾಂತ ಸ್ವಾಮಿ ಮಾತನಾಡಿ, ಸಮಾನತಾ ಸಮಾವೇಶಕ್ಕೆ ನಾಡಿನ ಪೂಜ್ಯರು, ಜನಪ್ರತಿನಿಧಿಗಳು ಹಾಗೂ ಗಣ್ಯರನ್ನು ಆಹ್ವಾನಿಸಲಾಗುವುದು ಎಂದರು.</p>.<p>ಕಲ್ಯಾಣ ಕರ್ನಾಟಕ ಭಾಗದ ಹೋರಾಟಗಾರ ಲಕ್ಷ್ಮಣ ದಸ್ತಿ ಮಾತನಾಡಿಮ ಬೃಹತ್ ಪ್ರಮಾಣದಲ್ಲಿ ಹಮ್ಮಿಕೊಂಡಿರುವ ಸಮಾನತಾ ಸಮಾವೇಶ ಕಾರ್ಯಕ್ರಮದ ಯಶಸ್ವಿಗೆ ಬೀದರ್, ಕಲಬುರಗಿ ಭಾಗದ ಕ್ರಿಯಾಶೀಲ ನಾಯಕರ ಸಾಮಾಜಿಕ ಕಾರ್ಯಕರ್ತರ ಉಪಸಮಿತಿಗಳನ್ನು ರಚಿಸಲಾಗುವುದು ಎಂದು ತಿಳಿಸಿದರು.</p>.<p>ಸಭೆಯಲ್ಲಿ ಶಾಹೀನ್ ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಅಬ್ದುಲ್ ಖದೀರ್, ಪ್ರಮುಖರಾದ ವಿನಯ್ ಮಾಳಗೆ, ಚಂದ್ರಶೇಖರ ಪಾಟೀಲ, ಶಿವಶಂಕರ ಟೋಕರೆ, ಮಹಾಲಿಂಗ, ಕೇದಾರನಾಥ ಪಾಟೀಲ, ರೋಹನ್, ಉದಯಕುಮಾರ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>