<p>ಬಸವಕಲ್ಯಾಣ: ನಗರದ ನೂತನ ಅನುಭವ ಮಂಟಪ ಸಮೀಪದ ಬಸವ ಮಹಾಮನೆ ಸಂಸ್ಥೆಯಿಂದ ಫೆಬ್ರುವರಿ 21, 22 ಮತ್ತು 23ರಂದು ಸಮತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ' ಎಂದು ಮಹಾಮನೆ ಸಂಸ್ಥೆ ಅಧ್ಯಕ್ಷ ಬೆಲ್ದಾಳ ಸಿದ್ದರಾಮ ಶರಣರು ತಿಳಿಸಿದ್ದಾರೆ.</p>.<p>ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, ಕೆಲ ವರ್ಷಗಳಿಂದ ಅನುಭವ ಮಂಟಪ ಸಂಸತ್ತು ಕಾರ್ಯಕ್ರಮ ಸಹ ಹಮ್ಮಿಕೊಳ್ಳಲಾಗುತ್ತಿದೆ. ಈ ಸಲ ಸಮಾವೇಶದ ಜೊತೆಯಲ್ಲಿ 7ನೇ ಸಂಸತ್ತು ಕಾರ್ಯಕ್ರಮವಿರುತ್ತದೆ. ವಿವಿಧ ಗೋಷ್ಠಿಗಳು ಜರುಗಲಿವೆ. ಮಠಾಧೀಶರು, ಸಾಹಿತಿ, ಚಿಂತಕರು, ರಾಜಕೀಯ ಮುಖಂಡರು, ಗಣ್ಯರು ಪಾಲ್ಗೊಳ್ಳುವರು. ಈ ಬಗ್ಗೆ ಈಗಾಗಲೇ ಪುರ್ವಸಿದ್ಧತಾ ಸಭೆ ಹಮ್ಮಿಕೊಂಡು ಸಕಲ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ’ ಎಂದು ತಿಳಿಸಿದ್ದಾರೆ.</p>.<p>ಸಮಾಜ ಮತ್ತು ಜೀವನದಲ್ಲಿ ಅಶಾಂತಿಯಿದೆ. ಜಾತಿ ತಾರತಮ್ಯವಿದೆ. ಆದ್ದರಿಂದ ಬಸವಾದಿ ಶರಣರ ತತ್ವವನ್ನು ಸಾರಿ ಸಮತೆಯೆಡೆಗೆ ಕೊಂಡೊಯ್ಯುವ ಕಾರ್ಯಕ್ರಮದ ಅಗತ್ಯವಿದೆ. ಮೂರು ದಿನಗಳ ಈ ಮಹತ್ವದ ಸಮಾರಂಭದಲ್ಲಿ ಹೆಚ್ಚಿನವರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಸವಕಲ್ಯಾಣ: ನಗರದ ನೂತನ ಅನುಭವ ಮಂಟಪ ಸಮೀಪದ ಬಸವ ಮಹಾಮನೆ ಸಂಸ್ಥೆಯಿಂದ ಫೆಬ್ರುವರಿ 21, 22 ಮತ್ತು 23ರಂದು ಸಮತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ' ಎಂದು ಮಹಾಮನೆ ಸಂಸ್ಥೆ ಅಧ್ಯಕ್ಷ ಬೆಲ್ದಾಳ ಸಿದ್ದರಾಮ ಶರಣರು ತಿಳಿಸಿದ್ದಾರೆ.</p>.<p>ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, ಕೆಲ ವರ್ಷಗಳಿಂದ ಅನುಭವ ಮಂಟಪ ಸಂಸತ್ತು ಕಾರ್ಯಕ್ರಮ ಸಹ ಹಮ್ಮಿಕೊಳ್ಳಲಾಗುತ್ತಿದೆ. ಈ ಸಲ ಸಮಾವೇಶದ ಜೊತೆಯಲ್ಲಿ 7ನೇ ಸಂಸತ್ತು ಕಾರ್ಯಕ್ರಮವಿರುತ್ತದೆ. ವಿವಿಧ ಗೋಷ್ಠಿಗಳು ಜರುಗಲಿವೆ. ಮಠಾಧೀಶರು, ಸಾಹಿತಿ, ಚಿಂತಕರು, ರಾಜಕೀಯ ಮುಖಂಡರು, ಗಣ್ಯರು ಪಾಲ್ಗೊಳ್ಳುವರು. ಈ ಬಗ್ಗೆ ಈಗಾಗಲೇ ಪುರ್ವಸಿದ್ಧತಾ ಸಭೆ ಹಮ್ಮಿಕೊಂಡು ಸಕಲ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ’ ಎಂದು ತಿಳಿಸಿದ್ದಾರೆ.</p>.<p>ಸಮಾಜ ಮತ್ತು ಜೀವನದಲ್ಲಿ ಅಶಾಂತಿಯಿದೆ. ಜಾತಿ ತಾರತಮ್ಯವಿದೆ. ಆದ್ದರಿಂದ ಬಸವಾದಿ ಶರಣರ ತತ್ವವನ್ನು ಸಾರಿ ಸಮತೆಯೆಡೆಗೆ ಕೊಂಡೊಯ್ಯುವ ಕಾರ್ಯಕ್ರಮದ ಅಗತ್ಯವಿದೆ. ಮೂರು ದಿನಗಳ ಈ ಮಹತ್ವದ ಸಮಾರಂಭದಲ್ಲಿ ಹೆಚ್ಚಿನವರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>