<p><strong>ಬೀದರ್:</strong> ಡಾ.ಚನ್ನಬಸವ ಪಟ್ಟದ್ದೇವರು ಪ್ರಸಾದ ನಿಲಯದಲ್ಲಿ ಆಯೋಜಿಸಿದ್ದ 166ನೇ ತಿಂಗಳ ಅನುಭವ ಮಂಟಪ ಕಾರ್ಯಕ್ರಮವನ್ನು ನಿವೃತ್ತ ಪ್ರಾಚಾರ್ಯ ಸಂಗ್ರಾಮ ಇಂಗಳೆ ಉದ್ಘಾಟಿಸಿದರು.</p>.<p>ನಂತರ ಮಾತನಾಡಿದ ಅವರು,' ಬಸವಾದಿ ಶರಣರು ಹಾಕಿಕೊಟ್ಟು ಮಾರ್ಗದಲ್ಲಿ ಸಾಗಿದರೆ ಪ್ರತಿಯೊಬ್ಬರು ನೆಮ್ಮದಿಯ ಜೀವನ ಸಾಗಿಸಬಹುದು ' ಎಂದು ಹೇಳಿದರು.</p>.<p>’ಶರಣರ ವಚನಗಳು ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಕೆಲಸ ಮಾಡುತ್ತವೆ. ಆದ್ದರಿಂದ ವಚನಗಳು ಸಮಾಜಕ್ಕೆ ದಾರಿದೀಪವಾಗಿವೆ' ಎಂದು ತಿಳಿಸಿದರು.</p>.<p>ಶಿವಯೋಗ ಕುಟೀರದ ಪಂಚಯ್ಯ ಸ್ವಾಮೀಜಿ ಮಾತನಾಡಿ,' ಪ್ರಮಾಣಿಕತೆಯಿಂದ ಸತ್ಯಶುದ್ಧ ಕಾಯಕ ಮಾಡಿ ಅಂತರಂಗ ಬಹಿರಂಗದಿಂದ ಶುದ್ಧವಾಗಿರಬೇಕು. ಮಕ್ಕಳಿಗೆ ಉತ್ತಮ ಸಂಸ್ಕೃತಿ ನೀಡಬೇಕು ' ಎಂದು ಸಲಹೆ ನೀಡಿದರು.</p>.<p>ಪ್ರವಚನಕಾರ್ತಿ ಭಾರತಿ ಆರ್. ಪಾಟೀಲ ಮಾತನಾಡಿದರು. ಪ್ರಸಾದ ನಿಲಯದ ಸಂಚಾಲಕ ಪ್ರೊ.ಉಮಾಕಾಂತ ಮೀಸೆ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಶಿಕ್ಷಕ ಶ್ರೀಕಾಂತ ಬಿರಾದಾರ ಇದ್ದರು. ಕಲಾವಿದರಾದ ಚನ್ನಬಸಪ್ಪ ನೌಬಾದೆ, ನಾಗನಾಥ ಪಾಂಚಾಳ, ರೇವಣಪ್ಪ ಮೂಲಗೆ ವಚನ ಸಂಗೀತ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಡಾ.ಚನ್ನಬಸವ ಪಟ್ಟದ್ದೇವರು ಪ್ರಸಾದ ನಿಲಯದಲ್ಲಿ ಆಯೋಜಿಸಿದ್ದ 166ನೇ ತಿಂಗಳ ಅನುಭವ ಮಂಟಪ ಕಾರ್ಯಕ್ರಮವನ್ನು ನಿವೃತ್ತ ಪ್ರಾಚಾರ್ಯ ಸಂಗ್ರಾಮ ಇಂಗಳೆ ಉದ್ಘಾಟಿಸಿದರು.</p>.<p>ನಂತರ ಮಾತನಾಡಿದ ಅವರು,' ಬಸವಾದಿ ಶರಣರು ಹಾಕಿಕೊಟ್ಟು ಮಾರ್ಗದಲ್ಲಿ ಸಾಗಿದರೆ ಪ್ರತಿಯೊಬ್ಬರು ನೆಮ್ಮದಿಯ ಜೀವನ ಸಾಗಿಸಬಹುದು ' ಎಂದು ಹೇಳಿದರು.</p>.<p>’ಶರಣರ ವಚನಗಳು ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಕೆಲಸ ಮಾಡುತ್ತವೆ. ಆದ್ದರಿಂದ ವಚನಗಳು ಸಮಾಜಕ್ಕೆ ದಾರಿದೀಪವಾಗಿವೆ' ಎಂದು ತಿಳಿಸಿದರು.</p>.<p>ಶಿವಯೋಗ ಕುಟೀರದ ಪಂಚಯ್ಯ ಸ್ವಾಮೀಜಿ ಮಾತನಾಡಿ,' ಪ್ರಮಾಣಿಕತೆಯಿಂದ ಸತ್ಯಶುದ್ಧ ಕಾಯಕ ಮಾಡಿ ಅಂತರಂಗ ಬಹಿರಂಗದಿಂದ ಶುದ್ಧವಾಗಿರಬೇಕು. ಮಕ್ಕಳಿಗೆ ಉತ್ತಮ ಸಂಸ್ಕೃತಿ ನೀಡಬೇಕು ' ಎಂದು ಸಲಹೆ ನೀಡಿದರು.</p>.<p>ಪ್ರವಚನಕಾರ್ತಿ ಭಾರತಿ ಆರ್. ಪಾಟೀಲ ಮಾತನಾಡಿದರು. ಪ್ರಸಾದ ನಿಲಯದ ಸಂಚಾಲಕ ಪ್ರೊ.ಉಮಾಕಾಂತ ಮೀಸೆ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಶಿಕ್ಷಕ ಶ್ರೀಕಾಂತ ಬಿರಾದಾರ ಇದ್ದರು. ಕಲಾವಿದರಾದ ಚನ್ನಬಸಪ್ಪ ನೌಬಾದೆ, ನಾಗನಾಥ ಪಾಂಚಾಳ, ರೇವಣಪ್ಪ ಮೂಲಗೆ ವಚನ ಸಂಗೀತ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>