<p>ಬೀದರ್: ತಾಲ್ಲೂಕಿನ ಹಮಿಲಾಪುರದ ದಿ ಬುದ್ಧ ಯುತ್ ಕ್ಲಬ್ ವತಿಯಿಂದ ಬೀದರ್ ಗ್ರಾಮೀಣ ಪೊಲೀಸ್<br />ಠಾಣೆ ಸಿಬ್ಬಂದಿಗೆ ಸ್ಯಾನಿಟೈಸರ್<br />ಹಾಗೂ ಮಾಸ್ಕ್ ಉಚಿತವಾಗಿ ವಿತರಿಸಲಾಯಿತು.</p>.<p>ವಿ.ಎಂ. ರಾಂಪುರೆ ಪಬ್ಲಿಕ್ ಶಾಲೆ ಅಧ್ಯಕ್ಷರೂ ಆದ ಸಂಘದ ಅಧ್ಯಕ್ಷ ಮಹೇಶ ವಿ. ರಾಂಪುರೆ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಪಿಎಸ್ಐ ಸುವರ್ಣಾ ಅವರಿಗೆ ಸ್ಯಾನಿಟೈಸರ್ನ ಐದು ಲೀಟರ್ ಬಾಟಲಿ, 35 ಚಿಕ್ಕ ಬಾಟಲಿಗಳು ಹಾಗೂ 35 ಮಾಸ್ಕ್ಗಳನ್ನು ಹಸ್ತಾಂತರಿಸಿದರು.</p>.<p>‘ಕೊರೊನಾ ಸೋಂಕು ತಡೆಯುವಲ್ಲಿ ವೈದ್ಯರು, ಪೊಲೀಸರು, ಪೌರಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡವರಿಗೆ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಬೀದರ್<br />ಗ್ರಾಮೀಣ ಪೊಲೀಸ್ ಠಾಣೆ, ನೆಹರೂ ಯುವ ಕೇಂದ್ರ ಹಾಗೂ ವಿ.ಎಂ. ರಾಂಪುರೆ ಶಾಲೆ ಸಹಯೋಗದಲ್ಲಿ ಉಚಿತ ಸ್ಯಾನಿಟೈಸರ್ ಹಾಗೂ ಮಾಸ್ಕ್ ವಿತರಿಸಲಾಗುತ್ತಿದೆ’ ಎಂದು ಅವರು ತಿಳಿಸಿದರು.</p>.<p>‘ಕೊರೊನಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅತ್ಯಂತ ಮುಖ್ಯವಾಗಿದೆ’ ಎಂದು ಹೇಳಿದರು.</p>.<p>ಎಎಸ್ಐ ಶಿವಾಜಿ, ಸತೀಶ ರಾಮಖಾನೆ, ಆಕಾಶ ಹಾರೂರಗೇರಿ, ಸಚಿನ್ ಮೇತ್ರೆ, ಸತ್ಯವಾನ್ ಕಾಂಬಳೆ, ಕರುಣಶೀಲ ಸೋನಿ, ನೀಲಕಂಠ, ಸುಂದರ ಮೇಲ್ದೊಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ತಾಲ್ಲೂಕಿನ ಹಮಿಲಾಪುರದ ದಿ ಬುದ್ಧ ಯುತ್ ಕ್ಲಬ್ ವತಿಯಿಂದ ಬೀದರ್ ಗ್ರಾಮೀಣ ಪೊಲೀಸ್<br />ಠಾಣೆ ಸಿಬ್ಬಂದಿಗೆ ಸ್ಯಾನಿಟೈಸರ್<br />ಹಾಗೂ ಮಾಸ್ಕ್ ಉಚಿತವಾಗಿ ವಿತರಿಸಲಾಯಿತು.</p>.<p>ವಿ.ಎಂ. ರಾಂಪುರೆ ಪಬ್ಲಿಕ್ ಶಾಲೆ ಅಧ್ಯಕ್ಷರೂ ಆದ ಸಂಘದ ಅಧ್ಯಕ್ಷ ಮಹೇಶ ವಿ. ರಾಂಪುರೆ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಪಿಎಸ್ಐ ಸುವರ್ಣಾ ಅವರಿಗೆ ಸ್ಯಾನಿಟೈಸರ್ನ ಐದು ಲೀಟರ್ ಬಾಟಲಿ, 35 ಚಿಕ್ಕ ಬಾಟಲಿಗಳು ಹಾಗೂ 35 ಮಾಸ್ಕ್ಗಳನ್ನು ಹಸ್ತಾಂತರಿಸಿದರು.</p>.<p>‘ಕೊರೊನಾ ಸೋಂಕು ತಡೆಯುವಲ್ಲಿ ವೈದ್ಯರು, ಪೊಲೀಸರು, ಪೌರಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡವರಿಗೆ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಬೀದರ್<br />ಗ್ರಾಮೀಣ ಪೊಲೀಸ್ ಠಾಣೆ, ನೆಹರೂ ಯುವ ಕೇಂದ್ರ ಹಾಗೂ ವಿ.ಎಂ. ರಾಂಪುರೆ ಶಾಲೆ ಸಹಯೋಗದಲ್ಲಿ ಉಚಿತ ಸ್ಯಾನಿಟೈಸರ್ ಹಾಗೂ ಮಾಸ್ಕ್ ವಿತರಿಸಲಾಗುತ್ತಿದೆ’ ಎಂದು ಅವರು ತಿಳಿಸಿದರು.</p>.<p>‘ಕೊರೊನಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅತ್ಯಂತ ಮುಖ್ಯವಾಗಿದೆ’ ಎಂದು ಹೇಳಿದರು.</p>.<p>ಎಎಸ್ಐ ಶಿವಾಜಿ, ಸತೀಶ ರಾಮಖಾನೆ, ಆಕಾಶ ಹಾರೂರಗೇರಿ, ಸಚಿನ್ ಮೇತ್ರೆ, ಸತ್ಯವಾನ್ ಕಾಂಬಳೆ, ಕರುಣಶೀಲ ಸೋನಿ, ನೀಲಕಂಠ, ಸುಂದರ ಮೇಲ್ದೊಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>