<p>ಬೀದರ್: ರಾಜ್ಯದಲ್ಲಿ ಕ್ರೈಸ್ತರ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳ ಕುರಿತು ಜನಪ್ರತಿನಿಧಿಗಳು ವಿಧಾನಸಭೆಯಲ್ಲಿ ಧ್ವನಿ ಎತ್ತಬೇಕು ಎಂದು ಇಂಡಿಯನ್ ಕ್ರಿಶ್ಚಿಯನ್ ವೆಲ್ಫೇರ್ ಅಸೋಸಿಯೇಷನ್ ರಾಜ್ಯ ಘಟಕದ ಅಧ್ಯಕ್ಷ ಸಂಜಯ ಜಾಗೀರದಾರ್ ಒತ್ತಾಯಿಸಿದ್ದಾರೆ.</p>.<p>ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದ ಅವರು, ವಿವಿಧೆಡೆ ನಡೆದ ಚರ್ಚ್ಗಳ ಮೇಲಿನ ದಾಳಿ, ಸಭಾಪಾಲಕರು ಹಾಗೂ ಕ್ರೈಸ್ತ ಸಮುದಾಯದವರ ಮೇಲಿನ ಹಲ್ಲೆ ಪ್ರಕರಣಗಳ ಕುರಿತು ಗಮನ ಸೆಳೆದರು.</p>.<p>ಕ್ರೈಸ್ತರು ಶಾಂತಿಪ್ರಿಯರಾಗಿದ್ದಾರೆ. ಕ್ರೈಸ್ತ ಮಿಷನರಿಗಳು ವಿವಿಧ ಕ್ಷೇತ್ರಗಳಿಗೆ ನೀಡಿದ ಕೊಡುಗೆ ಅಪಾರವಾಗಿದೆ. ಆದರೂ, ಕ್ರೈಸ್ತರ ಮೇಲೆ ಇಲ್ಲಸಲ್ಲದ ಆರೋಪ ಹೊರೆಸಲಾಗುತ್ತಿದೆ. ವಿನಾಕಾರಣ ದೌರ್ಜನ್ಯ ಪ್ರಕರಣಗಳು ಮುಂದುವರಿದಿವೆ ಎಂದು ಹೇಳಿದರು.</p>.<p>ಕ್ರೈಸ್ತರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಹಲ್ಲೆ ಪ್ರಕರಣಗಳು ಪುನರಾವರ್ತನೆಯಾಗದಂತೆ ನೋಡಿಕೋಳ್ಳಬೇಕು. ಕ್ರೈಸ್ತರಿಗೆ ರಕ್ಷಣೆ ಒದಗಿಸಬೇಕು ಎಂದು ಮನವಿ ಮಾಡಿದರು.</p>.<p>ಹುಬ್ಬಳ್ಳಿಯಲ್ಲಿ ಕ್ರೈಸ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸ್ಥಳದಲ್ಲೇ ಹುಬ್ಬಳ್ಳಿಯ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ಪಡೆದರು. ಕ್ರೈಸ್ತರಿಗೆ ರಕ್ಷಣೆ ನೀಡಲು ಸೂಚಿಸಿದರು ಎಂದು ಜಾಹೀರದಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ರಾಜ್ಯದಲ್ಲಿ ಕ್ರೈಸ್ತರ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳ ಕುರಿತು ಜನಪ್ರತಿನಿಧಿಗಳು ವಿಧಾನಸಭೆಯಲ್ಲಿ ಧ್ವನಿ ಎತ್ತಬೇಕು ಎಂದು ಇಂಡಿಯನ್ ಕ್ರಿಶ್ಚಿಯನ್ ವೆಲ್ಫೇರ್ ಅಸೋಸಿಯೇಷನ್ ರಾಜ್ಯ ಘಟಕದ ಅಧ್ಯಕ್ಷ ಸಂಜಯ ಜಾಗೀರದಾರ್ ಒತ್ತಾಯಿಸಿದ್ದಾರೆ.</p>.<p>ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದ ಅವರು, ವಿವಿಧೆಡೆ ನಡೆದ ಚರ್ಚ್ಗಳ ಮೇಲಿನ ದಾಳಿ, ಸಭಾಪಾಲಕರು ಹಾಗೂ ಕ್ರೈಸ್ತ ಸಮುದಾಯದವರ ಮೇಲಿನ ಹಲ್ಲೆ ಪ್ರಕರಣಗಳ ಕುರಿತು ಗಮನ ಸೆಳೆದರು.</p>.<p>ಕ್ರೈಸ್ತರು ಶಾಂತಿಪ್ರಿಯರಾಗಿದ್ದಾರೆ. ಕ್ರೈಸ್ತ ಮಿಷನರಿಗಳು ವಿವಿಧ ಕ್ಷೇತ್ರಗಳಿಗೆ ನೀಡಿದ ಕೊಡುಗೆ ಅಪಾರವಾಗಿದೆ. ಆದರೂ, ಕ್ರೈಸ್ತರ ಮೇಲೆ ಇಲ್ಲಸಲ್ಲದ ಆರೋಪ ಹೊರೆಸಲಾಗುತ್ತಿದೆ. ವಿನಾಕಾರಣ ದೌರ್ಜನ್ಯ ಪ್ರಕರಣಗಳು ಮುಂದುವರಿದಿವೆ ಎಂದು ಹೇಳಿದರು.</p>.<p>ಕ್ರೈಸ್ತರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಹಲ್ಲೆ ಪ್ರಕರಣಗಳು ಪುನರಾವರ್ತನೆಯಾಗದಂತೆ ನೋಡಿಕೋಳ್ಳಬೇಕು. ಕ್ರೈಸ್ತರಿಗೆ ರಕ್ಷಣೆ ಒದಗಿಸಬೇಕು ಎಂದು ಮನವಿ ಮಾಡಿದರು.</p>.<p>ಹುಬ್ಬಳ್ಳಿಯಲ್ಲಿ ಕ್ರೈಸ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸ್ಥಳದಲ್ಲೇ ಹುಬ್ಬಳ್ಳಿಯ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ಪಡೆದರು. ಕ್ರೈಸ್ತರಿಗೆ ರಕ್ಷಣೆ ನೀಡಲು ಸೂಚಿಸಿದರು ಎಂದು ಜಾಹೀರದಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>