ಬೀದರ್: ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಗರದ ಸಿದ್ಧಾರೂಢ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಯ ಸಂಸ್ಕೃತ ಪಠಣ ವಿಭಾಗದಲ್ಲಿ ವಿದ್ಯಾರಣ್ಯ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಚಿನ್ಮಯ ವಿದ್ಯಾನಂದ ಜೋಶಿ ಪ್ರಥಮ ಸ್ಥಾನ ಪಡೆದು ಸತತ ಎರಡನೇ ಬಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.