ಬಸವೇಶ್ವರ, ಅಂಬೇಡ್ಕರ್ ವೃತ್ತ, ಬಸ್ ನಿಲ್ದಾಣ, ಸುಭಾಷ, ಶಿವಾಜಿ ವೃತ್ತ, ಎಪಿಎಂಸಿ ಮಾರುಕಟ್ಟೆ ಪ್ರದೇಶದಲ್ಲಿ ದಾಳಿ ನಡೆಸಿ ಇಬ್ಬರು ಚಿಂದಿ ಆಯುವ ಮಕ್ಕಳನ್ನು ರಕ್ಷಿಸಲಾಗಿದೆ. ಈ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿ ಎದುರು ಹಾಜರುಪಡಿಸಿ, ಪಾಲಕರಿಂದ ಇನ್ನೂ ಮುಂದೆ ಮಕ್ಕಳನ್ನು ಚಿಂದಿ ಆಯುಲು ಕಳುಹಿಸುವುದಿಲ್ಲ. ಶಾಲೆಗೆ ಕಳುಹಿಸುತ್ತೇವೆ ಎಂಬ ಮುಚ್ಚಳಿಕೆ ಪತ್ರವನ್ನು ಬರೆಯಿಸಿಕೊಂಡು, ಪಾಲಕರ ವಶಕ್ಕೆ ನೀಡಲಾಗಿದೆ.