ಬೀದರ್: ಶಾಂತಿಕಿರಣ ಚಾರಿಟಬಲ್ ಟ್ರಸ್ಟ್ ಸಂಚಾಲಿತ ನಗರದ ಸ್ವಾಮಿ ನರೇಂದ್ರ ಪದವಿಪೂರ್ವ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜಿನಲ್ಲಿ ಸವಿತಾ ಮಹರ್ಷಿ ಜಯಂತಿ, ಮಹಾತ್ಮ ಗಾಂಧೀಜಿ ಪುಣ್ಯ ತಿಥಿ ಹಾಗೂ ಹುತಾತ್ಮ ದಿನ ಆಚರಿಸಲಾಯಿತು.
ಟ್ರಸ್ಟ್ ಅಧ್ಯಕ್ಷ ಚಂದ್ರಕಾಂತ ಪಾಟೀಲ ಅವರು ಸವಿತಾ ಮಹರ್ಷಿ ಹಾಗೂ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾತನಾಡಿದರು.