ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: ಎಸ್‍ಬಿಐ ಸಾಲ ಮೇಳಕ್ಕೆ ಚಾಲನೆ

Last Updated 10 ಜನವರಿ 2020, 14:43 IST
ಅಕ್ಷರ ಗಾತ್ರ

ಬೀದರ್‌: ಭಾರತೀಯ ಸ್ಟೇಟ್ ಬ್ಯಾಂಕ್‍ನ ಅಂಬೇಡ್ಕರ್ ವೃತ್ತ ಬಳಿಯ ಶಾಖೆಯ ಆವರಣದಲ್ಲಿ ಶುಕ್ರವಾರ ಗೃಹ ಸಾಲ ಮೇಳಕ್ಕೆ ಚಾಲನೆ ನೀಡಲಾಯಿತು.

ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಹಣಕಾಸು ನಿಯಂತ್ರಣಾಧಿಕಾರಿ ಡಾ.ಸಿ.ವಿ.ರಾಜು ಕಾರ್ಯಕ್ರಮ ಉದ್ಘಾಟಿಸಿದರು.

‘ಮನೆ ನಿರ್ಮಾಣ, ನಿವೇಶನ ಖರೀದಿಗೆ ಎಸ್‌ಬಿಐ ಕಡಿಮೆ ಬಡ್ಡಿ ದರದಲ್ಲಿ ಸಾಲ ಒದಗಿಸುತ್ತಿದೆ. ವಾಹನ ಖರೀದಿಗೂ ಸಾಲ ಕೊಡುತ್ತಿದೆ. ಗ್ರಾಹಕರು ಇದರ ಲಾಭ ಪಡೆಯಬೇಕು’ ಎಂದು ತಿಳಿಸಿದರು.

ಎಸ್‍ಬಿಐ ಬೀದರ್ ಪ್ರಾದೇಶಿಕ ವ್ಯವಸ್ಥಾಪಕ ಕೆ.ಆರ್.ಶ್ರೀರಾಮ ಇದ್ದರು. ಪ್ರಧಾನ ವ್ಯವಸ್ಥಾಪಕ ಕೆ.ನಾಗರಾಜ್, ಚಂದ್ರಶೇಖರನ್ ಇದ್ದರು.

ರಮೇಶ ಸಿಂಧೆ ನಿರೂಪಿಸಿದರು. ಉಮೇಶ ಜಾಧವ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT