ಬೀದರ್: ಔರಾದ್ ತಾಲ್ಲೂಕಿನ ವಡಗಾಂವ್ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಪರಿಶಿಷ್ಟ ಜಾತಿಯ ಮುಖಂಡ ಬಾಬುರಾವ ಅಡಕೆ ಅವರು ನಗರದಲ್ಲಿ ಶನಿವಾರ ಬಿಜೆಪಿ ಸೇರ್ಪಡೆಯಾದರು.
ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಅವರು ಪಕ್ಷದ ಧ್ವಜ ಕೊಟ್ಟು ಬರಮಾಡಿಕೊಂಡರು. ಬಾಬುರಾವ ಅಡಕೆ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ‘ಆಮ್ ಆದ್ಮಿ’ ಪಕ್ಷದಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದೆ, ಬೀದರ್ ನಗರ ಘಟಕದ ಅಧ್ಯಕ್ಷ ಶಶಿಧರ್ ಹೊಸಳ್ಳಿ, ರಾಜ್ಯ ಪ್ರಕೋಷ್ಠ ಸಂಚಾಲಕ ರಾಜಶೇಖರ ನಾಗಮೂರ್ತಿ, ಬಿಜೆಪಿ ದಕ್ಷಿಣ ಕ್ಷೇತ್ರದ ಮುಖಂಡ ನಾಗಭೂಷಣ ಕಮಠಾಣೆ ಹಾಜರಿದ್ದರು.