<p>ಖಟಕಚಿಂಚೋಳಿ: ಸಮೀಪದ ಮಾಸಿಮಾಡ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಹಾಗೂ ವಿಜ್ಞಾನ ವಿಷಯ ಬೋಧಿಸುವ ಕಾಯಂ ಶಿಕ್ಷಕರಿಲ್ಲದಿರುವುದರಿಂದ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಹಿನ್ನಡೆಯಾಗಬಹುದು ಎಂಬ ಆತಂಕ ವಿದ್ಯಾರ್ಥಿಗಳನ್ನು ಕಾಡುತ್ತಿದೆ.</p>.<p>ಇನ್ನು ಮೂರು ತಿಂಗಳಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಆರಂಭವಾಗಲಿವೆ. ಸದ್ಯ ಕನ್ನಡ ವಿಷಯ ಬೋಧಿಸುವ ಅತಿಥಿ ಶಿಕ್ಷಕರಿಗೆ ಬೇರೆಡೆ ನೇಮಕಾತಿ ಆಗಿದೆ. ಹೀಗಾಗಿ ಅವರು ಯಾವಾಗಬೇಕಾದರೂ ಹೋಗಬಹುದು. ಇದರಿಂದ ಮುಂದೇನು ಎಂಬ ಚಿಂತೆ ಎದುರಾಗಿದೆ.</p>.<p>ಕಾಯಂ ಶಿಕ್ಷಕರು ಕಳೆದ ವರ್ಷವೇ ಬೇರೆಡೆಗೆ ವರ್ಗಾವಣೆಯಾಗಿ ಹೋಗಿದ್ದಾರೆ. ಹೀಗಾಗಿ ಆ ವಿಷಯ ಬೋಧಿಸುವ ಶಿಕ್ಷಕರಿಲ್ಲ. ಇನ್ನೂ ಅತಿಥಿ ಶಿಕ್ಷಕರು ಯಾವಾಗಬೇಕಾದರೂ ಬಿಟ್ಟು ಹೋಗಬಹುದು. ಅವರಿಗೆ ಯಾವುದೇ ರೀತಿಯ ನಿರ್ಬಂಧ ಇರುವುದಿಲ್ಲ. ಹೀಗಾಗಿ ಕಾಯಂ ಶಿಕ್ಷಕರನ್ನು ನೇಮಿಸಬೇಕು ಎಂಬುದು ವಿದ್ಯಾರ್ಥಿಗಳ ಆಗ್ರಹವಾಗಿದೆ.</p>.<p>ನಮ್ಮ ಶಾಲೆಯಲ್ಲಿ ಕನ್ನಡ ಹಾಗೂ ವಿಜ್ಞಾನ ವಿಷಯ ಬೋಧಿಸುವ ಶಿಕ್ಷಕರಿಲ್ಲ. ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿರುವುದರ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ಮುಖ್ಯಶಿಕ್ಷಕ ಓಂಕಾರ ಬಲ್ಲೂರೆ ಅವರು ತಿಳಿಸುತ್ತಾರೆ.</p>.<p>‘ಕಳೆದ ವರ್ಷದಿಂದ ಕನ್ನಡ, ವಿಜ್ಞಾನ ಬೋಧಿಸುವ ಶಿಕ್ಷಕರಿಲ್ಲ. ಮೇಲಧಿಕಾರಿಗಳು ಕೇವಲ ಸುಳ್ಳು ಆಶ್ವಾಸನೆ ನೀಡುತ್ತಿದ್ದಾರೆ.</p>.<p>ಈಗ ವಾರ್ಷಿಕ ಪರೀಕ್ಷೆಯ ಸಮಯವಿದೆ. ಈಗಲಾದರೂ ಅಧಿಕಾರಿಗಳು ಸುಳ್ಳು ಭರವಸೆ ನೀಡುವುದನ್ನು ಬಿಡಿ, ನಮಗೆ ಶಿಕ್ಷಕರನ್ನು ಕೊಡಿ, ನಾವು ಅಭ್ಯಾಸ ಮಾಡಬೇಕು’ ಎಂಬುದು ವಿದ್ಯಾರ್ಥಿಗಳ ಅಳಲಾಗಿದೆ.</p>.<p>ಪ್ರಸ್ತುತ ದಿನಗಳಲ್ಲಿ ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಕಳುಹಿಸಲು ಪಾಲಕರು ಹಿಂದೇಟು ಹಾಕುವ ವಾತಾವರಣ ನಿರ್ಮಾಣವಾಗಿದೆ. ಅಂಥ ವರ್ಷವಿಡೀ ಶಿಕ್ಷಕರೇ ಇಲ್ಲದೇ ಇರುವುದರಿಂದ ಮುಂದಿನ ವರ್ಷದಲ್ಲಿ ದಾಖಲಾತಿ ಪ್ರಮಾಣ ಕಡಿಮೆ ಆಗುವ ಸಾಧ್ಯತೆ ಕಾಣುತ್ತಿದೆ ಎಂಬುದು ಪಾಲಕರ ಮನದಾಳದ ಮಾತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಖಟಕಚಿಂಚೋಳಿ: ಸಮೀಪದ ಮಾಸಿಮಾಡ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಹಾಗೂ ವಿಜ್ಞಾನ ವಿಷಯ ಬೋಧಿಸುವ ಕಾಯಂ ಶಿಕ್ಷಕರಿಲ್ಲದಿರುವುದರಿಂದ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಹಿನ್ನಡೆಯಾಗಬಹುದು ಎಂಬ ಆತಂಕ ವಿದ್ಯಾರ್ಥಿಗಳನ್ನು ಕಾಡುತ್ತಿದೆ.</p>.<p>ಇನ್ನು ಮೂರು ತಿಂಗಳಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಆರಂಭವಾಗಲಿವೆ. ಸದ್ಯ ಕನ್ನಡ ವಿಷಯ ಬೋಧಿಸುವ ಅತಿಥಿ ಶಿಕ್ಷಕರಿಗೆ ಬೇರೆಡೆ ನೇಮಕಾತಿ ಆಗಿದೆ. ಹೀಗಾಗಿ ಅವರು ಯಾವಾಗಬೇಕಾದರೂ ಹೋಗಬಹುದು. ಇದರಿಂದ ಮುಂದೇನು ಎಂಬ ಚಿಂತೆ ಎದುರಾಗಿದೆ.</p>.<p>ಕಾಯಂ ಶಿಕ್ಷಕರು ಕಳೆದ ವರ್ಷವೇ ಬೇರೆಡೆಗೆ ವರ್ಗಾವಣೆಯಾಗಿ ಹೋಗಿದ್ದಾರೆ. ಹೀಗಾಗಿ ಆ ವಿಷಯ ಬೋಧಿಸುವ ಶಿಕ್ಷಕರಿಲ್ಲ. ಇನ್ನೂ ಅತಿಥಿ ಶಿಕ್ಷಕರು ಯಾವಾಗಬೇಕಾದರೂ ಬಿಟ್ಟು ಹೋಗಬಹುದು. ಅವರಿಗೆ ಯಾವುದೇ ರೀತಿಯ ನಿರ್ಬಂಧ ಇರುವುದಿಲ್ಲ. ಹೀಗಾಗಿ ಕಾಯಂ ಶಿಕ್ಷಕರನ್ನು ನೇಮಿಸಬೇಕು ಎಂಬುದು ವಿದ್ಯಾರ್ಥಿಗಳ ಆಗ್ರಹವಾಗಿದೆ.</p>.<p>ನಮ್ಮ ಶಾಲೆಯಲ್ಲಿ ಕನ್ನಡ ಹಾಗೂ ವಿಜ್ಞಾನ ವಿಷಯ ಬೋಧಿಸುವ ಶಿಕ್ಷಕರಿಲ್ಲ. ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿರುವುದರ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ಮುಖ್ಯಶಿಕ್ಷಕ ಓಂಕಾರ ಬಲ್ಲೂರೆ ಅವರು ತಿಳಿಸುತ್ತಾರೆ.</p>.<p>‘ಕಳೆದ ವರ್ಷದಿಂದ ಕನ್ನಡ, ವಿಜ್ಞಾನ ಬೋಧಿಸುವ ಶಿಕ್ಷಕರಿಲ್ಲ. ಮೇಲಧಿಕಾರಿಗಳು ಕೇವಲ ಸುಳ್ಳು ಆಶ್ವಾಸನೆ ನೀಡುತ್ತಿದ್ದಾರೆ.</p>.<p>ಈಗ ವಾರ್ಷಿಕ ಪರೀಕ್ಷೆಯ ಸಮಯವಿದೆ. ಈಗಲಾದರೂ ಅಧಿಕಾರಿಗಳು ಸುಳ್ಳು ಭರವಸೆ ನೀಡುವುದನ್ನು ಬಿಡಿ, ನಮಗೆ ಶಿಕ್ಷಕರನ್ನು ಕೊಡಿ, ನಾವು ಅಭ್ಯಾಸ ಮಾಡಬೇಕು’ ಎಂಬುದು ವಿದ್ಯಾರ್ಥಿಗಳ ಅಳಲಾಗಿದೆ.</p>.<p>ಪ್ರಸ್ತುತ ದಿನಗಳಲ್ಲಿ ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಕಳುಹಿಸಲು ಪಾಲಕರು ಹಿಂದೇಟು ಹಾಕುವ ವಾತಾವರಣ ನಿರ್ಮಾಣವಾಗಿದೆ. ಅಂಥ ವರ್ಷವಿಡೀ ಶಿಕ್ಷಕರೇ ಇಲ್ಲದೇ ಇರುವುದರಿಂದ ಮುಂದಿನ ವರ್ಷದಲ್ಲಿ ದಾಖಲಾತಿ ಪ್ರಮಾಣ ಕಡಿಮೆ ಆಗುವ ಸಾಧ್ಯತೆ ಕಾಣುತ್ತಿದೆ ಎಂಬುದು ಪಾಲಕರ ಮನದಾಳದ ಮಾತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>