ತಂದೆ-ತಾಯಿ ಕಣ್ಣಿಗೆ ಕಾಣುವ ದೇವರು. ಮಕ್ಕಳು ನಿತ್ಯ ಪಾಲಕರ ಪೂಜೆ ಮಾಡಬೇಕು. ಅವರ ಆಜ್ಞೆ ಪಾಲಿಸಬೇಕು. ಅವರನ್ನು ಗೌರವದಿಂದ ಕಾಣಬೇಕು ಎಂದು ಹೇಳಿದರು.
ಋಷಿಕೇಶ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಸಂತೋಷಕುಮಾರ ಮಂಗಳೂರೆ ಮಾತನಾಡಿ, ತಂದೆ-ತಾಯಿ ಮಕ್ಕಳನ್ನು ಸಲಹುತ್ತಾರೆ. ಉತ್ತಮ ಸಂಸ್ಕಾರ ನೀಡುತ್ತಾರೆ. ಅವರಿಗಾಗಿ ತಮ್ಮ ಸರ್ವಸ್ವವನ್ನು ತ್ಯಾಗ ಮಾಡುತ್ತಾರೆ ಎಂದು ತಿಳಿಸಿದರು.