<p><strong>ಬೀದರ್</strong>: ‘ಸಾಹಿತ್ಯದ ಮೂಲಕ ವಿಜ್ಞಾನ ಬೆಳೆಸುವ ದಿಸೆಯಲ್ಲಿ 2023ರ ಫೆಬ್ರುವರಿಯಲ್ಲಿ ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಅಕಾಡೆಮಿಯ ಅನುದಾನದಿಂದ ವಿಜ್ಞಾನ ದಿನ ಆಚರಿಸಲಾಗುವುದು’ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಿಇಒ ಎ.ಎಂ. ರಮೇಶ ತಿಳಿಸಿದರು.</p>.<p>ನಗರದ ಕರ್ನಾಟಕ ಸಾಹಿತ್ಯ ಸಂಘಕ್ಕೆ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಸಾಹಿತ್ಯ ಚಟುವಟಿಕೆಗಳ ಬಗ್ಗೆ ಅರಿತು ಪ್ರಶಂಸೆ ವ್ಯಕ್ತಪಡಿಸಿ ಅವರು ಮಾತನಾಡಿದರು.</p>.<p>‘ವಿಜ್ಞಾನ ಕುರಿತು ಹೆಚ್ಚಿನ ಸಾಹಿತ್ಯ ಹೊರಬಂದರೆ ಯುವ ಪೀಳಿಗೆಗೆ ಸದುಪಯೋಗವಾಗಲಿದೆ’ ಎಂದರು.</p>.<p>ನಿವೃತ್ತ ಕುಲಪತಿ ಪ್ರೊ.ಬಿ.ಜಿ. ಮೂಲಿಮನಿ ಮಾತನಾಡಿ, ‘ವಿಜ್ಞಾನದ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಇಂದಿನ ಯುವ ಪೀಳಿಗೆಗೆ ಪ್ರೇರಣೆ ನೀಡಬೇಕು’ ಎಂದು ಹೇಳಿದರು.</p>.<p>ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಜಗನ್ನಾಥ ಹೆಬ್ಬಾಳೆ ಮಾತನಾಡಿದರು. ಇದೇ ಸಂದರ್ಭದಲ್ಲಿ ಎ.ಎಂ.ರಮೇಶ, ವಿಶ್ರಾಂತ ಕುಲಪತಿ ಪ್ರೊ. ಬಿ.ಜಿ.ಮೂಲಿಮನಿ ಹಾಗೂ ಅಕಾಡೆಮಿ ಆಡಳಿತಾಧಿಕಾರಿ ಮಹಾದೇವೇಗೌಡ ಅವರನ್ನು ಸನ್ಮಾನಿಸಲಾಯಿತು.</p>.<p>ಕರ್ನಾಟಕ ಕಾಲೇಜಿನ ರಾಜೇಂದ್ರ ಬಿರಾದಾರ, ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಸಂಯೋಜಕ ರಾಜಕುಮಾರ ಹೆಬ್ಬಾಳೆ, ಕಾರ್ಯದರ್ಶಿ ಸುನೀತಾ ಕೂಡ್ಲಿಕರ್, ಮಹಾನಂದ ಮಡಕಿ, ಶಿವಶರಣಪ್ಪ ಗಣೇಶಪೂರ, ಪ್ರಕಾಶ ಕನ್ನಾಳೆ, ಉಮಾಕಾಂತ, ಶಿವಕುಮಾರ ಹಾಗೂ ಪರಮೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ಸಾಹಿತ್ಯದ ಮೂಲಕ ವಿಜ್ಞಾನ ಬೆಳೆಸುವ ದಿಸೆಯಲ್ಲಿ 2023ರ ಫೆಬ್ರುವರಿಯಲ್ಲಿ ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಅಕಾಡೆಮಿಯ ಅನುದಾನದಿಂದ ವಿಜ್ಞಾನ ದಿನ ಆಚರಿಸಲಾಗುವುದು’ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಿಇಒ ಎ.ಎಂ. ರಮೇಶ ತಿಳಿಸಿದರು.</p>.<p>ನಗರದ ಕರ್ನಾಟಕ ಸಾಹಿತ್ಯ ಸಂಘಕ್ಕೆ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಸಾಹಿತ್ಯ ಚಟುವಟಿಕೆಗಳ ಬಗ್ಗೆ ಅರಿತು ಪ್ರಶಂಸೆ ವ್ಯಕ್ತಪಡಿಸಿ ಅವರು ಮಾತನಾಡಿದರು.</p>.<p>‘ವಿಜ್ಞಾನ ಕುರಿತು ಹೆಚ್ಚಿನ ಸಾಹಿತ್ಯ ಹೊರಬಂದರೆ ಯುವ ಪೀಳಿಗೆಗೆ ಸದುಪಯೋಗವಾಗಲಿದೆ’ ಎಂದರು.</p>.<p>ನಿವೃತ್ತ ಕುಲಪತಿ ಪ್ರೊ.ಬಿ.ಜಿ. ಮೂಲಿಮನಿ ಮಾತನಾಡಿ, ‘ವಿಜ್ಞಾನದ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಇಂದಿನ ಯುವ ಪೀಳಿಗೆಗೆ ಪ್ರೇರಣೆ ನೀಡಬೇಕು’ ಎಂದು ಹೇಳಿದರು.</p>.<p>ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಜಗನ್ನಾಥ ಹೆಬ್ಬಾಳೆ ಮಾತನಾಡಿದರು. ಇದೇ ಸಂದರ್ಭದಲ್ಲಿ ಎ.ಎಂ.ರಮೇಶ, ವಿಶ್ರಾಂತ ಕುಲಪತಿ ಪ್ರೊ. ಬಿ.ಜಿ.ಮೂಲಿಮನಿ ಹಾಗೂ ಅಕಾಡೆಮಿ ಆಡಳಿತಾಧಿಕಾರಿ ಮಹಾದೇವೇಗೌಡ ಅವರನ್ನು ಸನ್ಮಾನಿಸಲಾಯಿತು.</p>.<p>ಕರ್ನಾಟಕ ಕಾಲೇಜಿನ ರಾಜೇಂದ್ರ ಬಿರಾದಾರ, ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಸಂಯೋಜಕ ರಾಜಕುಮಾರ ಹೆಬ್ಬಾಳೆ, ಕಾರ್ಯದರ್ಶಿ ಸುನೀತಾ ಕೂಡ್ಲಿಕರ್, ಮಹಾನಂದ ಮಡಕಿ, ಶಿವಶರಣಪ್ಪ ಗಣೇಶಪೂರ, ಪ್ರಕಾಶ ಕನ್ನಾಳೆ, ಉಮಾಕಾಂತ, ಶಿವಕುಮಾರ ಹಾಗೂ ಪರಮೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>