ಬೀದರ್: ಶೃಂಗೇರಿಯ ಆದಿ ಶಂಕರಾಚಾರ್ಯ ವೃತ್ತದ ಗೋಪುರದ ಮೇಲೆ ಕೆಲ ಕಿಡಿಗೇಡಿಗಳು ಎಸ್ಡಿಪಿಐ ಸಂಘಟನೆಯ ಧ್ವಜ ಹಾಕಿದ್ದನ್ನು ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಕುಲಕರ್ಣಿ ತೀವ್ರವಾಗಿ ಖಂಡಿಸಿದ್ದಾರೆ.
ದುಷ್ಕೃತ್ಯದಲ್ಲಿ ಭಾಗಿಯಾದ ಹಾಗೂ ಇದಕ್ಕೆ ಪ್ರೇರಣೆ ನೀಡಿದ ಶಕ್ತಿಗಳನ್ನು ಕೂಡಲೇ ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.