<p><strong>ಔರಾದ್:</strong> ಬಿತ್ತನೆ ಬೀಜ ಪೂರೈಕೆಯಲ್ಲಿ ನಿರ್ಲಕ್ಷ್ಯ ತೋರಿದ ಕೃಷಿ ಅಧಿಕಾರಿಗಳ ವಿರುದ್ಧ ರೈತರು ಗುರುವಾರ ಇಲ್ಲಿ ಪ್ರತಿಭಟನೆ ನಡೆಸಿದರು.</p>.<p>ಕೃಷಿ ಇಲಾಖೆಯವರು ಈಗಾಗಲೇ ಕೆಲ ರೈತರಿಗೆ ಬೀಜ ವಿತರಿಸಿದ್ದಾರೆ. ಬೀಜದಲ್ಲಿ ದೋಷ ಇದೆ ಎಂದು ಉಳಿದ ರೈತರಿಗೆ ಬೀಜ ವಿತರಿಸುತ್ತಿಲ್ಲ. ಈ ರೀತಿ ರೈತರಲ್ಲಿ ಗೊಂದಲ ಮೂಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳೂರ್ ದೂರಿದರು.</p>.<p>ತಾಲ್ಲೂಕಿನ ರೈತರು ಕಳೆದ ಎರಡು ವಾರದಿಂದ ಬೀಜಕ್ಕಾಗಿ ಅಲೆಯುತ್ತಿದ್ದಾರೆ. ಆದರೆ, ಕೃಷಿ ಅಧಿಕಾರಿಗಳು ಮಾತ್ರ ಸ್ಪಂದಿಸುತ್ತಿಲ್ಲ. ದೂರವಾಣಿ ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲ. ಇಂತಹ ಅಧಿಕಾರಿಗಳನ್ನು ಇಲ್ಲಿಂದ ತೆಗೆಯಬೇಕು ಎಂದು ಆಗ್ರಹಿಸಿದರು.</p>.<p>ಸಚಿವ ಪ್ರಭು ಚವಾಣ್ ಅವರ ತವರು ಕ್ಷೇತ್ರದಲ್ಲೇ ರೈತರು ಬಿತ್ತನೆ ಬೀಜಕ್ಕಾಗಿ ಪರದಾಡುತ್ತಿದ್ದಾರೆ. ಆದರೆ, ಅವರು ಮಾತ್ರ ಈ ವಿಷಯದಲ್ಲಿ ಮೌನ ವಹಿಸುತ್ತಿದ್ದಾರೆ. ಇಲಾಖೆ ತಪ್ಪಿನಿಂದ ರೈತರು ಸಂಕಷ್ಟ ಎದುರಿಸಬೇಕಾಗಿದೆ ಎಂದು ದೂರಿದರು.</p>.<p>ಸ್ಥಳಕ್ಕೆ ಬಂದ ತಹಶೀಲ್ದಾರ್ ಎಂ. ಚಂದ್ರಶೇಖರ ರೈತರನ್ನು ಸಮಾಧಾನ ಮಾಡಿದರು. ತಾನಾಜಿ ತೊರಣೆಕರ್, ಶ್ರಾವಣ ಕೊಳೆಕರ್, ಅಶೋಕ ದರಬಾರೆ, ಹರಿದೇವ ಸಂಗನಾಳ, ಸಚಿನ್, ರಮೇಶ ಶೇಳಕೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್:</strong> ಬಿತ್ತನೆ ಬೀಜ ಪೂರೈಕೆಯಲ್ಲಿ ನಿರ್ಲಕ್ಷ್ಯ ತೋರಿದ ಕೃಷಿ ಅಧಿಕಾರಿಗಳ ವಿರುದ್ಧ ರೈತರು ಗುರುವಾರ ಇಲ್ಲಿ ಪ್ರತಿಭಟನೆ ನಡೆಸಿದರು.</p>.<p>ಕೃಷಿ ಇಲಾಖೆಯವರು ಈಗಾಗಲೇ ಕೆಲ ರೈತರಿಗೆ ಬೀಜ ವಿತರಿಸಿದ್ದಾರೆ. ಬೀಜದಲ್ಲಿ ದೋಷ ಇದೆ ಎಂದು ಉಳಿದ ರೈತರಿಗೆ ಬೀಜ ವಿತರಿಸುತ್ತಿಲ್ಲ. ಈ ರೀತಿ ರೈತರಲ್ಲಿ ಗೊಂದಲ ಮೂಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳೂರ್ ದೂರಿದರು.</p>.<p>ತಾಲ್ಲೂಕಿನ ರೈತರು ಕಳೆದ ಎರಡು ವಾರದಿಂದ ಬೀಜಕ್ಕಾಗಿ ಅಲೆಯುತ್ತಿದ್ದಾರೆ. ಆದರೆ, ಕೃಷಿ ಅಧಿಕಾರಿಗಳು ಮಾತ್ರ ಸ್ಪಂದಿಸುತ್ತಿಲ್ಲ. ದೂರವಾಣಿ ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲ. ಇಂತಹ ಅಧಿಕಾರಿಗಳನ್ನು ಇಲ್ಲಿಂದ ತೆಗೆಯಬೇಕು ಎಂದು ಆಗ್ರಹಿಸಿದರು.</p>.<p>ಸಚಿವ ಪ್ರಭು ಚವಾಣ್ ಅವರ ತವರು ಕ್ಷೇತ್ರದಲ್ಲೇ ರೈತರು ಬಿತ್ತನೆ ಬೀಜಕ್ಕಾಗಿ ಪರದಾಡುತ್ತಿದ್ದಾರೆ. ಆದರೆ, ಅವರು ಮಾತ್ರ ಈ ವಿಷಯದಲ್ಲಿ ಮೌನ ವಹಿಸುತ್ತಿದ್ದಾರೆ. ಇಲಾಖೆ ತಪ್ಪಿನಿಂದ ರೈತರು ಸಂಕಷ್ಟ ಎದುರಿಸಬೇಕಾಗಿದೆ ಎಂದು ದೂರಿದರು.</p>.<p>ಸ್ಥಳಕ್ಕೆ ಬಂದ ತಹಶೀಲ್ದಾರ್ ಎಂ. ಚಂದ್ರಶೇಖರ ರೈತರನ್ನು ಸಮಾಧಾನ ಮಾಡಿದರು. ತಾನಾಜಿ ತೊರಣೆಕರ್, ಶ್ರಾವಣ ಕೊಳೆಕರ್, ಅಶೋಕ ದರಬಾರೆ, ಹರಿದೇವ ಸಂಗನಾಳ, ಸಚಿನ್, ರಮೇಶ ಶೇಳಕೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>