ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಸಂಘಕ್ಕೆ ಆಯ್ಕೆ

Last Updated 6 ಅಕ್ಟೋಬರ್ 2021, 12:58 IST
ಅಕ್ಷರ ಗಾತ್ರ

ಬೀದರ್: ಕರ್ನಾಟಕ ಸಂಯುಕ್ತ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಪದಾಧಿಕಾರಿಗಳು: ಅರುಣ ಬೀದರ್(ಅಧ್ಯಕ್ಷ), ಸುರೇಖಾ, ವಿನ್ಸೆಂಟ್ (ಉಪಾಧ್ಯಕ್ಷರು), ರಾಜಶೇಖರ (ಕಾರ್ಯದರ್ಶಿ), ಸಿದ್ದು, ರವಿ ವರ್ಮ (ಜಂಟಿ ಕಾರ್ಯದರ್ಶಿ).
ಸಮಾವೇಶ: ನಗರದ ಖಾಸಗಿ ಹೊಟೇಲ್‍ನಲ್ಲಿ ಕರ್ನಾಟಕ ಸಂಯುಕ್ತ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಸಂಘದಿಂದ ನೌಕರರ ಸಮಾವೇಶ ನಡೆಯಿತು.
ಇಲಾಖೆ ಗುತ್ತಿಗೆ ನೌಕರರ ಸೇವೆ ಮುಂದುವರಿಸಿ ಸೇವಾ ಭದ್ರತೆ ಒದಗಿಸಬೇಕು ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಮಹೇಶ ನಾಡಗೌಡ ಹೇಳಿದರು.
ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ನೌಕರರು ಕೋವಿಡ್ ವಾರಿಯರ್‍ಗಳಾಗಿ ಕೆಲಸ ಮಾಡಿದ್ದಾರೆ. ಹಲವು ಹೋರಾಟಗಳ ಫಲವಾಗಿ ಮತ್ತೆ ಮೂರು ತಿಂಗಳ ಅವಧಿಗೆ ಅವರ ಸೇವೆ ಮುಂದುವರಿಸಲಾಗಿದೆ ಎಂದು ತಿಳಿಸಿದರು.
ಸಿದ್ದು ನಿರೂಪಿಸಿದರು. ರಾಜಶೇಖರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT