ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬ್ಬಿಗೆ ₹ 3 ಸಾವಿರ ಬೆಲೆ ನಿಗದಿಪಡಿಸಿ

ಕರ್ನಾಟಕ ರಾಜ್ಯ ರೈತ ಸಂಘ ಒತ್ತಾಯ
Last Updated 3 ನವೆಂಬರ್ 2020, 15:46 IST
ಅಕ್ಷರ ಗಾತ್ರ

ಬೀದರ್: ಪ್ರಸಕ್ತ ವರ್ಷ ಪ್ರತಿ ಟನ್ ಕಬ್ಬಿಗೆ ₹ 3 ಸಾವಿರ ಬೆಲೆ ನಿಗದಿಪಡಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ (ಪುಟ್ಟಣ್ಣಯ್ಯ ಬಣ) ಒತ್ತಾಯಿಸಿದೆ.

ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಅವರ ನೇತೃತ್ವದಲ್ಲಿ ನಗರದಲ್ಲಿ ಜಿಲ್ಲಾಧಿಕಾರಿಗೆ ಬರೆದ ಮನವಿ ಪತ್ರವನ್ನು ಸಿರಸ್ತೆದಾರ ಪ್ರೇಮದಾಸ ಅವರಿಗೆ ಸಲ್ಲಿಸಿದರು.

ಈ ವರ್ಷವೂ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರ ಸಭೆ ನಡೆಸಿ ಕಬ್ಬು ಬೆಲೆ ನಿಗದಿಪಡಿಸಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಹೊಲಗಳಲ್ಲಿ ವಾಸವಾಗಿರುವ ರೈತರಿಗೆ ಸಿಂಗಲ್ ಫೇಸ್ ವಿದ್ಯುತ್ ಕೊಡಬೇಕು. ಬೆಳೆ ಹಾನಿಗೊಳಗಾದ ರೈತರಿಗೆ ಎಕರೆಗೆ ₹ 25 ಸಾವಿರ ವಿಮೆ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು. ಕಬ್ಬು ಕಟಾವು ಹಾಗೂ ಕಬ್ಬು ಲಾರಿಗಳನ್ನು ತಡೆ ಹಿಡಿಯಲಾಗುವುದು ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT