ಆರನೇ ತರಗತಿಯ ಉರ್ದು ಪಠ್ಯಕ್ರಮದಲ್ಲಿ ಏಜಾಜ್ ಶೌರ್ಯದ ಕುರಿತ ಪಾಠ ಸೇರಿಸಲಾಗಿದೆ.
ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಅರ್ಧಾಪುರ ತಾಲ್ಲೂಕಿನ ಪರಡಿ ಗ್ರಾಮದ ಏಜಾಜ್, 2017ರ ಏಪ್ರಿಲ್ 30ರಂದು ಬಟ್ಟೆ ತೊಳೆಯಲು ಹೋಗಿ ನದಿಯಲ್ಲಿ ಮುಳುಗುತ್ತಿದ್ದ ಇಬ್ಬರು ಬಾಲಕಿಯರನ್ನು ಜೀವದ ಹಂಗು ತೊರೆದು ರಕ್ಷಿಸಿ ಸಾಹಸ ಮೆರೆದಿದ್ದರು. ಇದಕ್ಕಾಗಿ ಅವರಿಗೆ 2018ರ ಜನವರಿ 26ರಂದು ‘ರಾಷ್ಟ್ರೀಯ ಮಕ್ಕಳ ಶೌರ್ಯ ಪ್ರಶಸ್ತಿ’ ಕೊಟ್ಟು ಗೌರವಿಸಲಾಗಿತ್ತು. ಈಗ ಇದೇ ವಿಷಯವನ್ನು ಪಠ್ಯಕ್ಕೆ ಸೇರಿಸಲಾಗಿದೆ. ಬೇರೆಯವರಿಗೂ ಇದರಿಂದ ಸ್ಫೂರ್ತಿ ಸಿಗಬೇಕು ಎನ್ನುವ ದೃಷ್ಟಿಯಿಂದ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಮಹಾರಾಷ್ಟ್ರ ಶಿಕ್ಷಣ ಸಂಸ್ಥೆಯ ಮೂಲಗಳು ತಿಳಿಸಿವೆ.