ಆಡಳಿತ ಸೇವೆಯಲ್ಲಿ ತೊಡಗಿಸಿಕೊಳ್ಳ ಬಯಸುವ ಆಕಾಂಕ್ಷಿಗಳಿಗೆ ಜಿಲ್ಲೆಯಲ್ಲಿಯೇ ಯುಪಿಎಸ್ಸಿ, ಕೆಪಿಎಸ್ಸಿ ಪರೀಕ್ಷೆಗೆ ಸಿದ್ಧತೆಗೆ ಮಾರ್ಗದರ್ಶನ ನೀಡುತ್ತಿರುವುದು ಶ್ಲಾಘನೀಯ ಎಂದು ಅವರು ಹೇಳಿದರು.
ಜ್ಞಾನಸುಧಾ ಸಿವಿಲ್ ಸರ್ವಿಸ್ ಅಕಾಡೆಮಿಯ ತರಬೇತಿ ಹಾಗೂ ಮಾರ್ಗದರ್ಶನದಿಂದಾಗಿ ಕೆಎಎಸ್ ಪರೀಕ್ಷೆಯಲ್ಲಿ ಸಾಧನೆಗೈಯಲು ಸಾಧ್ಯವಾಗಿದೆ ಎಂದು ಶಾರದಮ್ಮ ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಪೂರ್ಣಿಮಾ ಜಿ, ನಿರ್ದೇಶಕ ಮುನೇಶ್ವರ ಲಾಖಾ, ಸಿವಿಲ್ ಸರ್ವಿಸೆಸ್ ಅಕಾಡೆಮಿಯ ನಿರ್ದೇಶಕ ಬಾಲಾಜಿ ಇದ್ದರು.