<p><strong>ಬಸವಕಲ್ಯಾಣ: </strong>ಇಲ್ಲಿ ಶನಿವಾರ ಗೋರಟಾ (ಬಿ)ದಲ್ಲಿ ಮೇ 28ರಂದು ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಡೆಯುವ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು.</p>.<p>ಶಾಸಕ ಶರಣು ಸಲಗರ ಮಾತನಾಡಿ, `ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಲವರು ಪ್ರಾಣತ್ಯಾಗ ಮಾಡಿದ್ದಾರೆ. ಅವರ ಹೋರಾಟದ ಜೀವನಗಾಥೆ ಮತ್ತು ಚಳವಳಿಯ ಬಗ್ಗೆ ಜನರಿಗೆ ತಿಳಿಸುವುದು ಅಗತ್ಯವಾಗಿದೆ. ಯುವ ಜನಾಂಗದಲ್ಲಿ ದೇಶಾಭಿಮಾನ ಬೆಳೆಸುವುದಕ್ಕೂ ಪ್ರೇರಣೆ ನೀಡಬೇಕಾಗಿದೆ. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ಏರ್ಪಡಿಸಬೇಕು. ಹೋರಾಟಗಾರರನ್ನು ಸನ್ಮಾನಿಸಿ, ಮೆರವಣಿಗೆ ಹಮ್ಮಿಕೊಳ್ಳಬೇಕು ಎಂದರು.</p>.<p>ಹುಲಸೂರ ತಹಶೀಲ್ದಾರ್ ಶಿವಾನಂದ ಮೇತ್ರೆ ಮಾತನಾಡಿ, `ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಾಗೂ ಪ್ರೇರಣಾದಾಯಕವಾಗಿ ಆಯೋಜಿಸಲಾಗುತ್ತದೆ. ನಾಲ್ಕು ಹಂತಗಳಲ್ಲಿ ವಿವಿಧ ಚಟಟುವಟಿಕೆಗಳು ನಡೆಯಲಿವೆ' ಎಂದು ತಿಳಿಸಿದರು.</p>.<p>ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ, ಕವನ ವಾಚನ, ರಂಗೋಲಿ, ಚಿತ್ರಕಲೆ, ಭಾಷಣ ಸ್ಪರ್ಧೆ ಆಯೋಜಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹಾದೇವ ಜಮ್ಮು, ಬಿಇಒ ಅಂಬಾದಾಸ ಜಮಾದಾರ, ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರವೀಂದ್ರನಾಥ, ಸಮಾಜ ಕಲ್ಯಾಣಾಧಿಕಾರಿ ಗಿರೀಶ ರಂಜೋಳಕರ್, ಶ್ರೀಶೈಲ್ ಕಾಚಾಪುರ, ಶರಣಪ್ಪ ಪಾಟೀಲ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ: </strong>ಇಲ್ಲಿ ಶನಿವಾರ ಗೋರಟಾ (ಬಿ)ದಲ್ಲಿ ಮೇ 28ರಂದು ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಡೆಯುವ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು.</p>.<p>ಶಾಸಕ ಶರಣು ಸಲಗರ ಮಾತನಾಡಿ, `ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಲವರು ಪ್ರಾಣತ್ಯಾಗ ಮಾಡಿದ್ದಾರೆ. ಅವರ ಹೋರಾಟದ ಜೀವನಗಾಥೆ ಮತ್ತು ಚಳವಳಿಯ ಬಗ್ಗೆ ಜನರಿಗೆ ತಿಳಿಸುವುದು ಅಗತ್ಯವಾಗಿದೆ. ಯುವ ಜನಾಂಗದಲ್ಲಿ ದೇಶಾಭಿಮಾನ ಬೆಳೆಸುವುದಕ್ಕೂ ಪ್ರೇರಣೆ ನೀಡಬೇಕಾಗಿದೆ. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ಏರ್ಪಡಿಸಬೇಕು. ಹೋರಾಟಗಾರರನ್ನು ಸನ್ಮಾನಿಸಿ, ಮೆರವಣಿಗೆ ಹಮ್ಮಿಕೊಳ್ಳಬೇಕು ಎಂದರು.</p>.<p>ಹುಲಸೂರ ತಹಶೀಲ್ದಾರ್ ಶಿವಾನಂದ ಮೇತ್ರೆ ಮಾತನಾಡಿ, `ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಾಗೂ ಪ್ರೇರಣಾದಾಯಕವಾಗಿ ಆಯೋಜಿಸಲಾಗುತ್ತದೆ. ನಾಲ್ಕು ಹಂತಗಳಲ್ಲಿ ವಿವಿಧ ಚಟಟುವಟಿಕೆಗಳು ನಡೆಯಲಿವೆ' ಎಂದು ತಿಳಿಸಿದರು.</p>.<p>ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ, ಕವನ ವಾಚನ, ರಂಗೋಲಿ, ಚಿತ್ರಕಲೆ, ಭಾಷಣ ಸ್ಪರ್ಧೆ ಆಯೋಜಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹಾದೇವ ಜಮ್ಮು, ಬಿಇಒ ಅಂಬಾದಾಸ ಜಮಾದಾರ, ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರವೀಂದ್ರನಾಥ, ಸಮಾಜ ಕಲ್ಯಾಣಾಧಿಕಾರಿ ಗಿರೀಶ ರಂಜೋಳಕರ್, ಶ್ರೀಶೈಲ್ ಕಾಚಾಪುರ, ಶರಣಪ್ಪ ಪಾಟೀಲ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>