<p><strong>ಬಸವಕಲ್ಯಾಣ</strong>: ತಾಲ್ಲೂಕಿನ ಸಸ್ತಾಪುರದಲ್ಲಿ ಸೋಮವಾರ ನಡೆದ ಉಪ ಚುನಾವಣೆಯ ಕಾಂಗ್ರೆಸ್ ಪ್ರಚಾರ ಸಭೆಗೆ ಬಂದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿಮಾನಿಗಳು ಕುರಿ, ಟಗರು ಕಾಣಿಕೆಯಾಗಿ ನೀಡಿದರು. ಕಂಬಳಿ ಹೊದಿಸಿ<br />ಸನ್ಮಾನಿಸಿದರು.</p>.<p>ಅಭ್ಯರ್ಥಿ ಮಾಲಾ ಬಿ.ನಾರಾಯಣರಾವ್ ಅವರನ್ನು ಬೆಂಬಲಿಗರು ಸನ್ಮಾನಿಸಿದರು. ತಮಟೆ, ಡೊಳ್ಳು ಬಾರಿಸುವ ಮೂಲಕ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿ ಸಿದ್ದರಾಮಯ್ಯ ಹಾಗೂ ಇತರೆ ಮುಖಂಡರನ್ನು ವೇದಿಕೆಗೆ ಕರೆತರಲಾಯಿತು. ಅವರ ಮೇಲೆ ಪುಷ್ಪವೃಷ್ಟಿಗೈಯಲಾಯಿತು.</p>.<p>ಸಭೆಯಲ್ಲಿ ಮಾಜಿ ಸಚಿವ ಎಚ್.ಕೆ.ಪಾಟೀಲ ಮಾತನಾಡಿ, `ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ 371 (ಜೆ) ಜಾರಿಗೆ ತರುವ ಮೂಲಕ ಈ ಭಾಗದ ಅಭಿವೃದ್ಧಿಗಾಗಿ ಕಾಂಗ್ರೆಸ್ ಪ್ರಯತ್ನಿಸಿದೆ. ಬಿಜೆಪಿಯವರು ವಿದೇಶದಲ್ಲಿನ ಕಪ್ಪು ಹಣ ತಂದು ಚುನಾವಣೆಯಾದ 100 ದಿನದೊಳಗೆ ದೇಶದ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ ತಲಾ ₹15 ಲಕ್ಷ ಪಾವತಿಸಲಾಗುತ್ತದೆ ಎಂದು ಸುಳ್ಳು ಹೇಳಿದರು. ಪ್ರಧಾನಿ ಮೋದಿಯವರು ಪ್ರತಿ ವರ್ಷ ₹2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಭರವಸೆ ನೀಡಿದರಾದರೂ ಇವರ ಅವಧಿಯಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ</strong>: ತಾಲ್ಲೂಕಿನ ಸಸ್ತಾಪುರದಲ್ಲಿ ಸೋಮವಾರ ನಡೆದ ಉಪ ಚುನಾವಣೆಯ ಕಾಂಗ್ರೆಸ್ ಪ್ರಚಾರ ಸಭೆಗೆ ಬಂದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿಮಾನಿಗಳು ಕುರಿ, ಟಗರು ಕಾಣಿಕೆಯಾಗಿ ನೀಡಿದರು. ಕಂಬಳಿ ಹೊದಿಸಿ<br />ಸನ್ಮಾನಿಸಿದರು.</p>.<p>ಅಭ್ಯರ್ಥಿ ಮಾಲಾ ಬಿ.ನಾರಾಯಣರಾವ್ ಅವರನ್ನು ಬೆಂಬಲಿಗರು ಸನ್ಮಾನಿಸಿದರು. ತಮಟೆ, ಡೊಳ್ಳು ಬಾರಿಸುವ ಮೂಲಕ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿ ಸಿದ್ದರಾಮಯ್ಯ ಹಾಗೂ ಇತರೆ ಮುಖಂಡರನ್ನು ವೇದಿಕೆಗೆ ಕರೆತರಲಾಯಿತು. ಅವರ ಮೇಲೆ ಪುಷ್ಪವೃಷ್ಟಿಗೈಯಲಾಯಿತು.</p>.<p>ಸಭೆಯಲ್ಲಿ ಮಾಜಿ ಸಚಿವ ಎಚ್.ಕೆ.ಪಾಟೀಲ ಮಾತನಾಡಿ, `ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ 371 (ಜೆ) ಜಾರಿಗೆ ತರುವ ಮೂಲಕ ಈ ಭಾಗದ ಅಭಿವೃದ್ಧಿಗಾಗಿ ಕಾಂಗ್ರೆಸ್ ಪ್ರಯತ್ನಿಸಿದೆ. ಬಿಜೆಪಿಯವರು ವಿದೇಶದಲ್ಲಿನ ಕಪ್ಪು ಹಣ ತಂದು ಚುನಾವಣೆಯಾದ 100 ದಿನದೊಳಗೆ ದೇಶದ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ ತಲಾ ₹15 ಲಕ್ಷ ಪಾವತಿಸಲಾಗುತ್ತದೆ ಎಂದು ಸುಳ್ಳು ಹೇಳಿದರು. ಪ್ರಧಾನಿ ಮೋದಿಯವರು ಪ್ರತಿ ವರ್ಷ ₹2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಭರವಸೆ ನೀಡಿದರಾದರೂ ಇವರ ಅವಧಿಯಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>