ಹುಮನಾಬಾದ್: ‘ಭಾರತಕ್ಕೆ ಛತ್ರಪತಿ ಶಿವಾಜಿ ಮಹಾರಾಜರ ಕೊಡುಗೆ ಅಪಾರವಾಗಿದೆ. ಅವರು ಕೇವಲ ಒಂದೇ ಒಂದು ಸಮುದಾಯದ ಪ್ರಗತಿಗೆ ಕಾರಣವಾಗದೇ ಎಲ್ಲ ಸಮುದಾಯಗಳ ಏಳಿಗೆಯನ್ನು ಬಯಸಿದ್ದರು’ ಎಂದು ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ ಪಾಟೀಲ ತಿಳಿಸಿದರು.
ಪಟ್ಟಣದ ತಹಶೀಲ್ ಕಚೇರಿಯಲ್ಲಿ ನಡೆದ ಛತ್ರಪತಿ ಶಿವಾಜಿ ಮಾಹಾರಾಜ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಿವಾಜಿ ಮಹಾರಾಜರ ಬದುಕು, ಜೀವನ ಚರಿತ್ರೆ ಅತ್ಯಮೂಲ್ಯವಾಗಿದೆ. ಅವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಅಂಜುಂ ತಬಸುಮ್, ರವಿ ಗವಾಳಕರ್, ಜ್ಞಾನದೇವ ಧುಮಾಳೆ, ದೇವಾನಂದ ಗವಾಳಕರ್, ವೆಂಕಟೇಶ ಜಾಧವ, ರಾಮರಾವ್ ಧನಾಜಿ ಸೇರಿದಂತೆ ಇತರರು ಹಾಜರಿದ್ದರು.