ಇಲ್ಲಿಯ ಶಿವಪುತ್ರ ಡಿ. ಪಾಟೀಲ ಅವರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕನ್ನಡ ಕ್ರಿಯಾ ಸಮಿತಿಯ ಸಾರಿಗೆ ಕನ್ನಡ ರತ್ನ ಪ್ರಶಸ್ತಿ ಲಭಿಸಿದೆ.
ಸಾರಿಗೆ ಸಂಸ್ಥೆಯ ಸೇವಾ ಅವಧಿಯಲ್ಲಿ ಕನ್ನಡ ನಾಡು, ನುಡಿಗೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ನಡೆದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕನ್ನಡ ಕ್ರಿಯಾ ಸಮಿತಿಯ ವಾರ್ಷಿಕ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಸಮಿತಿಯ ಅಧ್ಯಕ್ಷ ವ.ಚ. ಚನ್ನೇಗೌಡ ಪ್ರಶಸ್ತಿ ಪ್ರದಾನ ಮಾಡಿದರು. ಸಮಿತಿಯ ಪ್ರಭು ಸ್ವಾಮಿ, ಹುಸೇನ್, ಗಜಣ್ಣ, ಶಕೀಲ್, ವೆಂಕಟೇಶ, ಸರವರ್, ಬಸೀರ್, ವಿಠ್ಠಲ್ ಇದ್ದರು. .