ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಪುತ್ರ ಪಾಟೀಲಗೆ ಕನ್ನಡ ರತ್ನ ಪ್ರಶಸ್ತಿ

Last Updated 30 ನವೆಂಬರ್ 2020, 14:12 IST
ಅಕ್ಷರ ಗಾತ್ರ

ಇಲ್ಲಿಯ ಶಿವಪುತ್ರ ಡಿ. ಪಾಟೀಲ ಅವರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕನ್ನಡ ಕ್ರಿಯಾ ಸಮಿತಿಯ ಸಾರಿಗೆ ಕನ್ನಡ ರತ್ನ ಪ್ರಶಸ್ತಿ ಲಭಿಸಿದೆ.

ಸಾರಿಗೆ ಸಂಸ್ಥೆಯ ಸೇವಾ ಅವಧಿಯಲ್ಲಿ ಕನ್ನಡ ನಾಡು, ನುಡಿಗೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ನಡೆದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕನ್ನಡ ಕ್ರಿಯಾ ಸಮಿತಿಯ ವಾರ್ಷಿಕ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಸಮಿತಿಯ ಅಧ್ಯಕ್ಷ ವ.ಚ. ಚನ್ನೇಗೌಡ ಪ್ರಶಸ್ತಿ ಪ್ರದಾನ ಮಾಡಿದರು. ಸಮಿತಿಯ ಪ್ರಭು ಸ್ವಾಮಿ, ಹುಸೇನ್, ಗಜಣ್ಣ, ಶಕೀಲ್, ವೆಂಕಟೇಶ, ಸರವರ್, ಬಸೀರ್, ವಿಠ್ಠಲ್ ಇದ್ದರು. .

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT