<p><strong>ಬೀದರ್: </strong>ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘವು ಅಂಧ ಕಲಾವಿದರಿಗೆ ಕೊಡುವ ಪ್ರಸಕ್ತ ಸಾಲಿನ ಪುಟ್ಟರಾಜ ಪ್ರಶಸ್ತಿಗೆ<br />ಜಿಲ್ಲೆಯ ಹಿರಿಯ ಸಂಗೀತ ಕಲಾವಿದ ಶಿವಸ್ವಾಮಿ ಚೀನಕೇರಾ ಅವರನ್ನು ಆಯ್ಕೆ ಮಾಡಿದೆ.</p>.<p>ಹುಮನಾಬಾದ್ ತಾಲ್ಲೂಕಿನ ಚೀನಕೇರಾ ಗ್ರಾಮದ ಶಿವಸ್ವಾಮಿ ಅವರ ಮನೆಗೆ ಭೇಟಿ ನೀಡಿದ ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘದ ಅಧ್ಯಕ್ಷ ಪ್ರೊ. ಎಸ್.ವಿ. ಕಲ್ಮಠ, ಚಂದ್ರಶೇಖರ ಹೆಬ್ಬಾಳೆ, ಡಾ. ಎಸ್.ಬಿ. ಬಿರಾದಾರ, ಬಾಬುರಾವ್ ಮಡಿವಾಳ, ಕಂಟೆಪ್ಪ ಗಂದಿಗುಡಿ ಹಾಗೂ ವೈಜಿನಾಥ ಸಜ್ಜನಶೆಟ್ಟಿ ಅವರು ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನ ನೀಡಿದರು.</p>.<p>ಬೀದರ್ನ ಡಾ. ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ಮಾರ್ಚ್ 12 ರಂದು ನಡೆಯಲಿರುವ ಪಂಡಿತ ಪುಟ್ಟರಾಜ ಗವಾಯಿ ಅವರ 76ನೇ ಪುಣ್ಯತಿಥಿ, ಡಾ. ಪಂಡಿತ ಪುಟ್ಟರಾಜ ಕವಿಗವಾಯಿಗಳ 10ನೇ ಪುಣ್ಯತಿಥಿ ಹಾಗೂ ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘದ 18ನೇ ವಾರ್ಷಿಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರೊ. ಎಸ್.ವಿ. ಕಲ್ಮಠ ತಿಳಿಸಿದರು.</p>.<p>ಪ್ರಶಸ್ತಿಯು ₹5 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆಯನ್ನು ಒಳಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘವು ಅಂಧ ಕಲಾವಿದರಿಗೆ ಕೊಡುವ ಪ್ರಸಕ್ತ ಸಾಲಿನ ಪುಟ್ಟರಾಜ ಪ್ರಶಸ್ತಿಗೆ<br />ಜಿಲ್ಲೆಯ ಹಿರಿಯ ಸಂಗೀತ ಕಲಾವಿದ ಶಿವಸ್ವಾಮಿ ಚೀನಕೇರಾ ಅವರನ್ನು ಆಯ್ಕೆ ಮಾಡಿದೆ.</p>.<p>ಹುಮನಾಬಾದ್ ತಾಲ್ಲೂಕಿನ ಚೀನಕೇರಾ ಗ್ರಾಮದ ಶಿವಸ್ವಾಮಿ ಅವರ ಮನೆಗೆ ಭೇಟಿ ನೀಡಿದ ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘದ ಅಧ್ಯಕ್ಷ ಪ್ರೊ. ಎಸ್.ವಿ. ಕಲ್ಮಠ, ಚಂದ್ರಶೇಖರ ಹೆಬ್ಬಾಳೆ, ಡಾ. ಎಸ್.ಬಿ. ಬಿರಾದಾರ, ಬಾಬುರಾವ್ ಮಡಿವಾಳ, ಕಂಟೆಪ್ಪ ಗಂದಿಗುಡಿ ಹಾಗೂ ವೈಜಿನಾಥ ಸಜ್ಜನಶೆಟ್ಟಿ ಅವರು ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನ ನೀಡಿದರು.</p>.<p>ಬೀದರ್ನ ಡಾ. ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ಮಾರ್ಚ್ 12 ರಂದು ನಡೆಯಲಿರುವ ಪಂಡಿತ ಪುಟ್ಟರಾಜ ಗವಾಯಿ ಅವರ 76ನೇ ಪುಣ್ಯತಿಥಿ, ಡಾ. ಪಂಡಿತ ಪುಟ್ಟರಾಜ ಕವಿಗವಾಯಿಗಳ 10ನೇ ಪುಣ್ಯತಿಥಿ ಹಾಗೂ ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘದ 18ನೇ ವಾರ್ಷಿಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರೊ. ಎಸ್.ವಿ. ಕಲ್ಮಠ ತಿಳಿಸಿದರು.</p>.<p>ಪ್ರಶಸ್ತಿಯು ₹5 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆಯನ್ನು ಒಳಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>