ಶಿವರಾಜ್ ಸಿಂಗ್ ಚೌವಾಣ್ ಅವರು ಬೇರೆಯವರ ಬಗ್ಗೆ ಮಾತನಾಡುವ ಮೊದಲು ತಾವು ನುಡಿದಂತೆ ನಡೆದುಕೊಳ್ಳಬೇಕಿತ್ತು. ಮಧ್ಯಪ್ರದೇಶದಲ್ಲಿ ಚುನಾವಣೆಗೆ ಮುನ್ನ ₹450ಕ್ಕೆ ಸಿಲಿಂಡರ್ ಕೊಡಲಾಗುವುದು ಎಂದು ಭರವಸೆ ನೀಡಲಾಗಿತ್ತು. ಆದರೆ, ಈಗ ₹1,100ಕ್ಕೆ ಕೊಡಲಾಗುತ್ತಿದೆ. ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಅಧಿಕ ಸ್ಥಾನಗಳು ಲಭಿಸಲಿವೆ. ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.