<p><strong>ಬೀದರ್: </strong>ಶ್ರಾವಣ ಮಾಸದ ಕೊನೆಯ ಸೋಮವಾರ ಪ್ರಯುಕ್ತ ಜಿಲ್ಲೆಯ ವಿವಿಧ ಮಂದಿರಗಳಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.</p>.<p>ತೆಲಂಗಾಣ ಹಾಗೂ ಮಹಾರಾಷ್ಟ್ರದ ನೂರಾರು ಭಕ್ತರು ನಗರದ ಹೊರ ವಲಯದಲ್ಲಿರುವ ನರಸಿಂಹ ಝರಣಾ ಗುಹಾದೇವಾಲಯಕ್ಕೆ ಬಂದು ನರಸಿಂಹ ದೇವರ ದರ್ಶನ ಪಡೆದರು. ವಿಶೇಷ ಅಭಿಷೇಕ ನೆರವೇರಿಸಿ ತೆಂಗಿನಕಾಯಿ ಒಡೆದು ಕರ್ಪೂರ ಹಚ್ಚಿ ಭಕ್ತಿಭಾವ ತೋರಿದರು.</p>.<p>ಮಂದಿರದ ಆವರಣದಲ್ಲಿ ಭಕ್ತರ ಉದ್ದನೆಯ ಸಾಲು ಕಂಡು ಬಂದಿತು. ದೇವಸ್ಥಾನ ಆಡಳಿತ ಮಂಡಳಿಯವರು ಮಾಸ್ಕ್ ಧರಿಸಿ ಅಂತರ ಕಾಯ್ದುಕೊಂಡು ನಿಲ್ಲುವಂತೆ ಪದೇ ಪದೇ ಮನವಿ ಮಾಡುತ್ತಿದ್ದರೂ ಭಕ್ತರು ಗಂಭೀರವಾಗಿ ಪರಿಗಣಿಸಲಿಲ್ಲ. ಅನೇಕರು ಮಾಸ್ಕ್ ಸಹ ಧರಿಸಿರಲಿಲ್ಲ.</p>.<p>ತೆಲಂಗಾಣದಿಂದ ಬಂದಿದ್ದ ಭಕ್ತರು ದೇವಸ್ಥಾನದ ಆವರಣದಲ್ಲೇ ನೈವೇದ್ಯ ಸಿದ್ಧಪಡಿಸಿ ದೇವರಿಗೆ ಸಮರ್ಪಿಸಿದರು. ಕೆಲವರು ದೇವಸ್ಥಾನದ ಆವರಣದಲ್ಲಿರುವ ಪುಷ್ಕರಣಿಯಲ್ಲಿ ಪುಣ್ಯಸ್ನಾನ ಮಾಡಿದರು. ದೇವರ ದರ್ಶನ ಪಡೆದ ನಂತರ ಮಕ್ಕಳಿಗೆ ಆಟಿಕೆ ಸಾಮಗ್ರಿಗಳನ್ನು ಖರೀದಿಸಿ ಮನೆಗಳಿಗೆ ತೆರಳಿದರು.</p>.<p>ನಗರದ ಕೇಂದ್ರ ಸ್ಥಾನದಲ್ಲಿರುವ ಪಾಪನಾಶ ದೇವಸ್ಥಾನದಲ್ಲಿ ಸಹ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರಿಗೆ ತೆಂಗಿನಕಾಯಿ ಒಡೆದು, ಬಿಲ್ವಾರ್ಚನೆ ಮಾಡಿ ಭಕ್ತಿ ಸಮರ್ಪಿಸಿದರು.</p>.<p>ಬೀದರ್ ತಾಲ್ಲೂಕಿನ ಹೊನ್ನಿಕೇರಿ ದೇವಸ್ಥಾನದಲ್ಲಿ ಭಕ್ತರು ಕಿಕ್ಕಿರಿದು ಸೇರಿದ್ದರು. ಬೆಳಿಗ್ಗೆಯಿಂದ ಸಂಜೆಯ ವರೆಗೂ ದೇವರ ದರ್ಶನಕ್ಕೆ ಉದ್ದನೆಯ ಸಾಲು ಕಂಡು ಬಂದಿತು.</p>.<p>ಹರಕೆ ಹೊತ್ತ ಭಕ್ತರು ದೇವಸ್ಥಾನದ ಆವರಣದಲ್ಲಿ ಅಡುಗೆ ಮಾಡಿ ದೇವರಿಗೆ ನೈವೇದ್ಯ ಸಮರ್ಪಿಸಿದರು. ನಂತರ ತೆಂಗಿನಕಾಯಿ ಒಡೆದು ಅಗರಬತ್ತಿ ಹಾಗೂ ಕರ್ಪೂರ ಬೆಳಗಿ ಕೃತಾರ್ಥರಾದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಶ್ರಾವಣ ಮಾಸದ ಕೊನೆಯ ಸೋಮವಾರ ಪ್ರಯುಕ್ತ ಜಿಲ್ಲೆಯ ವಿವಿಧ ಮಂದಿರಗಳಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.</p>.<p>ತೆಲಂಗಾಣ ಹಾಗೂ ಮಹಾರಾಷ್ಟ್ರದ ನೂರಾರು ಭಕ್ತರು ನಗರದ ಹೊರ ವಲಯದಲ್ಲಿರುವ ನರಸಿಂಹ ಝರಣಾ ಗುಹಾದೇವಾಲಯಕ್ಕೆ ಬಂದು ನರಸಿಂಹ ದೇವರ ದರ್ಶನ ಪಡೆದರು. ವಿಶೇಷ ಅಭಿಷೇಕ ನೆರವೇರಿಸಿ ತೆಂಗಿನಕಾಯಿ ಒಡೆದು ಕರ್ಪೂರ ಹಚ್ಚಿ ಭಕ್ತಿಭಾವ ತೋರಿದರು.</p>.<p>ಮಂದಿರದ ಆವರಣದಲ್ಲಿ ಭಕ್ತರ ಉದ್ದನೆಯ ಸಾಲು ಕಂಡು ಬಂದಿತು. ದೇವಸ್ಥಾನ ಆಡಳಿತ ಮಂಡಳಿಯವರು ಮಾಸ್ಕ್ ಧರಿಸಿ ಅಂತರ ಕಾಯ್ದುಕೊಂಡು ನಿಲ್ಲುವಂತೆ ಪದೇ ಪದೇ ಮನವಿ ಮಾಡುತ್ತಿದ್ದರೂ ಭಕ್ತರು ಗಂಭೀರವಾಗಿ ಪರಿಗಣಿಸಲಿಲ್ಲ. ಅನೇಕರು ಮಾಸ್ಕ್ ಸಹ ಧರಿಸಿರಲಿಲ್ಲ.</p>.<p>ತೆಲಂಗಾಣದಿಂದ ಬಂದಿದ್ದ ಭಕ್ತರು ದೇವಸ್ಥಾನದ ಆವರಣದಲ್ಲೇ ನೈವೇದ್ಯ ಸಿದ್ಧಪಡಿಸಿ ದೇವರಿಗೆ ಸಮರ್ಪಿಸಿದರು. ಕೆಲವರು ದೇವಸ್ಥಾನದ ಆವರಣದಲ್ಲಿರುವ ಪುಷ್ಕರಣಿಯಲ್ಲಿ ಪುಣ್ಯಸ್ನಾನ ಮಾಡಿದರು. ದೇವರ ದರ್ಶನ ಪಡೆದ ನಂತರ ಮಕ್ಕಳಿಗೆ ಆಟಿಕೆ ಸಾಮಗ್ರಿಗಳನ್ನು ಖರೀದಿಸಿ ಮನೆಗಳಿಗೆ ತೆರಳಿದರು.</p>.<p>ನಗರದ ಕೇಂದ್ರ ಸ್ಥಾನದಲ್ಲಿರುವ ಪಾಪನಾಶ ದೇವಸ್ಥಾನದಲ್ಲಿ ಸಹ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರಿಗೆ ತೆಂಗಿನಕಾಯಿ ಒಡೆದು, ಬಿಲ್ವಾರ್ಚನೆ ಮಾಡಿ ಭಕ್ತಿ ಸಮರ್ಪಿಸಿದರು.</p>.<p>ಬೀದರ್ ತಾಲ್ಲೂಕಿನ ಹೊನ್ನಿಕೇರಿ ದೇವಸ್ಥಾನದಲ್ಲಿ ಭಕ್ತರು ಕಿಕ್ಕಿರಿದು ಸೇರಿದ್ದರು. ಬೆಳಿಗ್ಗೆಯಿಂದ ಸಂಜೆಯ ವರೆಗೂ ದೇವರ ದರ್ಶನಕ್ಕೆ ಉದ್ದನೆಯ ಸಾಲು ಕಂಡು ಬಂದಿತು.</p>.<p>ಹರಕೆ ಹೊತ್ತ ಭಕ್ತರು ದೇವಸ್ಥಾನದ ಆವರಣದಲ್ಲಿ ಅಡುಗೆ ಮಾಡಿ ದೇವರಿಗೆ ನೈವೇದ್ಯ ಸಮರ್ಪಿಸಿದರು. ನಂತರ ತೆಂಗಿನಕಾಯಿ ಒಡೆದು ಅಗರಬತ್ತಿ ಹಾಗೂ ಕರ್ಪೂರ ಬೆಳಗಿ ಕೃತಾರ್ಥರಾದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>