ಶ್ರೀಮಠದಲ್ಲಿ ಶ್ರೀಗಳು ಆನ್ಲೈನ್ ಮೂಲಕ ಕನ್ನಡ, ಮರಾಠಿ ಮತ್ತು ತೆಲುಗು ಭಾಷೆಯಲ್ಲಿ ಪ್ರವಚನ ನಡೆಸಿಕೊಟ್ಟು ಭಕ್ತರಿಗೆ ಜ್ಞಾನಧಾರೆ ಎರೆದಿದ್ದರು. ಆದರೆ ಈ ಬಾರಿ ಭಕ್ತರ ಒತ್ತಾಸೆ ಮೇರೆಗೆ ಶ್ರೀಗಳು ಎಲ್ಲರ ಸಮ್ಮುಖದಲ್ಲಿ ಪ್ರವಚನ ನಡೆಸಿ ಕೊಡಲು ನಿರ್ಧರಿಸಿದ್ದಾರೆ. ವಚನ ದರ್ಶನ ವಿಷಯದ ಮೇಲೆ ಶ್ರೀಗಳು ಚನ್ನಬಸವಾಶ್ರಮದಲ್ಲಿ ಪ್ರತಿದಿನ ಸಂಜೆ 5.30 ರಿಂದ 6.30ರ ವರೆಗೆ ಪ್ರವಚನ ನೀಡಲಿ
ದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.