<p>ಭಾಲ್ಕಿ: ‘ಶ್ರಾವಣ ಮಾಸದ ಪ್ರಯುಕ್ತ ಆ. 9 ರಿಂದ ಸೆ. 6 ರವರೆಗೆ ಪಟ್ಟಣದಲ್ಲಿ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಪ್ರವಚನ ನಡೆಸಿ ಕೊಡಲಿದ್ದಾರೆ’ ಎಂದು ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.</p>.<p>ಶ್ರೀಮಠದಲ್ಲಿ ಶ್ರೀಗಳು ಆನ್ಲೈನ್ ಮೂಲಕ ಕನ್ನಡ, ಮರಾಠಿ ಮತ್ತು ತೆಲುಗು ಭಾಷೆಯಲ್ಲಿ ಪ್ರವಚನ ನಡೆಸಿಕೊಟ್ಟು ಭಕ್ತರಿಗೆ ಜ್ಞಾನಧಾರೆ ಎರೆದಿದ್ದರು. ಆದರೆ ಈ ಬಾರಿ ಭಕ್ತರ ಒತ್ತಾಸೆ ಮೇರೆಗೆ ಶ್ರೀಗಳು ಎಲ್ಲರ ಸಮ್ಮುಖದಲ್ಲಿ ಪ್ರವಚನ ನಡೆಸಿ ಕೊಡಲು ನಿರ್ಧರಿಸಿದ್ದಾರೆ. ವಚನ ದರ್ಶನ ವಿಷಯದ ಮೇಲೆ ಶ್ರೀಗಳು ಚನ್ನಬಸವಾಶ್ರಮದಲ್ಲಿ ಪ್ರತಿದಿನ ಸಂಜೆ 5.30 ರಿಂದ 6.30ರ ವರೆಗೆ ಪ್ರವಚನ ನೀಡಲಿ<br />ದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.</p>.<p>ಭಕ್ತರು ಮಾಸ್ಕ್, ಸ್ಯಾನಿಟೈಸರ್ ಜತೆಗೆ ಪರಸ್ಪರ ಅಂತರ ಕಾಯ್ದುಕೊಂಡು ಪ್ರತಿ ದಿನ ಶ್ರೀಗಳ ಪ್ರವ<br />ಚನ ಆಲಿಸಬೇಕು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರವಚನದ ಲಾಭ ಪಡೆದುಕೊಳ್ಳಬೇಕು ಎಂದರು.</p>.<p>ಶ್ರಾವಣ ಮಾಸದ ಅಂಗವಾಗಿ ತಿಂಗಳ ಪರ್ಯಂತ ಪ್ರತಿದಿನ ಶ್ರೀಮಠದಲ್ಲಿ ಬೆಳಿಗ್ಗೆ ಅನ್ನ ದಾಸೋಹ, ಸಾಮೂಹಿಕ ಪ್ರಾರ್ಥನೆ, ಭಜನೆ ಹಾಗೂ ಸಂಗೀತ ಸೇರಿದಂತೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿವೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾಲ್ಕಿ: ‘ಶ್ರಾವಣ ಮಾಸದ ಪ್ರಯುಕ್ತ ಆ. 9 ರಿಂದ ಸೆ. 6 ರವರೆಗೆ ಪಟ್ಟಣದಲ್ಲಿ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಪ್ರವಚನ ನಡೆಸಿ ಕೊಡಲಿದ್ದಾರೆ’ ಎಂದು ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.</p>.<p>ಶ್ರೀಮಠದಲ್ಲಿ ಶ್ರೀಗಳು ಆನ್ಲೈನ್ ಮೂಲಕ ಕನ್ನಡ, ಮರಾಠಿ ಮತ್ತು ತೆಲುಗು ಭಾಷೆಯಲ್ಲಿ ಪ್ರವಚನ ನಡೆಸಿಕೊಟ್ಟು ಭಕ್ತರಿಗೆ ಜ್ಞಾನಧಾರೆ ಎರೆದಿದ್ದರು. ಆದರೆ ಈ ಬಾರಿ ಭಕ್ತರ ಒತ್ತಾಸೆ ಮೇರೆಗೆ ಶ್ರೀಗಳು ಎಲ್ಲರ ಸಮ್ಮುಖದಲ್ಲಿ ಪ್ರವಚನ ನಡೆಸಿ ಕೊಡಲು ನಿರ್ಧರಿಸಿದ್ದಾರೆ. ವಚನ ದರ್ಶನ ವಿಷಯದ ಮೇಲೆ ಶ್ರೀಗಳು ಚನ್ನಬಸವಾಶ್ರಮದಲ್ಲಿ ಪ್ರತಿದಿನ ಸಂಜೆ 5.30 ರಿಂದ 6.30ರ ವರೆಗೆ ಪ್ರವಚನ ನೀಡಲಿ<br />ದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.</p>.<p>ಭಕ್ತರು ಮಾಸ್ಕ್, ಸ್ಯಾನಿಟೈಸರ್ ಜತೆಗೆ ಪರಸ್ಪರ ಅಂತರ ಕಾಯ್ದುಕೊಂಡು ಪ್ರತಿ ದಿನ ಶ್ರೀಗಳ ಪ್ರವ<br />ಚನ ಆಲಿಸಬೇಕು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರವಚನದ ಲಾಭ ಪಡೆದುಕೊಳ್ಳಬೇಕು ಎಂದರು.</p>.<p>ಶ್ರಾವಣ ಮಾಸದ ಅಂಗವಾಗಿ ತಿಂಗಳ ಪರ್ಯಂತ ಪ್ರತಿದಿನ ಶ್ರೀಮಠದಲ್ಲಿ ಬೆಳಿಗ್ಗೆ ಅನ್ನ ದಾಸೋಹ, ಸಾಮೂಹಿಕ ಪ್ರಾರ್ಥನೆ, ಭಜನೆ ಹಾಗೂ ಸಂಗೀತ ಸೇರಿದಂತೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿವೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>