ಬೀದರ್: ಕಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘಟನೆ ವತಿಯಿಂದ ನಗರದ ಹಾಲು ಮತಗೊಂಡ ವಸತಿ ನಿಲಯದ ಆವರಣದಲ್ಲಿ ಬುಧವಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜನ್ಮದಿನ ಆಚರಿಸಲಾಯಿತು.
ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ತುಪ್ಪ, ಮೊಸರು ಹಾಗೂ ಹಾಲಿನ ಅಭಿಷೇಕ ಮಾಡಲಾಯಿತು. ಮುಖಂಡ ಅಮೃತರಾವ್ ಚಿಮಕೋಡೆ, ಜಿಲ್ಲಾ ಪಂಚಾಯಿತಿ ಸದಸ್ಯ ಬಾಬುರಾವ್ ಮಲ್ಕಾಪುರೆ, ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಲೋಕೇಶ ಮರ್ಜಾಪುರ, ಮಾಳಪ್ಪ ಅಡಸಾರೆ ಮೊದಲಾದವರು ಇದ್ದರು.