<p><strong>ಬೀದರ್:</strong> ಬರಗಾಲದ ವೇಳೆ ಸಿದ್ಧರಾಮೇಶ್ವರರು ಜನರ ಕುಡಿಯುವ ನೀರಿನ ಬವಣೆ ತಪ್ಪಿಸಿದ್ದರು ಎಂದು ಗುರು ರಾಚೋಟೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಹಾವಗಿಲಿಂಗೇಶ್ವರ ಶಿವಾಚಾರ್ಯ ನುಡಿದರು.</p>.<p>ಭಾಲ್ಕಿ ತಾಲ್ಲೂಕಿನ ಹಲಬರ್ಗಾ ಗ್ರಾಮದ ಗುರು ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ ಸಿದ್ಧರಾಮೇಶ್ವರ ಜಾತ್ರೆ ಪ್ರಯುಕ್ತ ಗಂಗಾ ಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>1972 ರಲ್ಲಿ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಉಂಟಾಗಿತ್ತು. ಜನ ಹನಿ ಹನಿ ನೀರಿಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಜನರ ಸಂಕಷ್ಟಕ್ಕೆ ಮರುಗಿದ ಸಿದ್ಧರಾಮೇಶ್ವರರು ಸ್ವತಃ ಬಾವಿ ತೋಡಿದ್ದರು ಎಂದು ತಿಳಿಸಿದರು.</p>.<p>ಅವರು ತೋಡಿದ್ದ 19 ಅಡಿ ಆಳದ ಬಾವಿ ಜನರ ಬಾಯಾರಿಕೆ ನೀಗಿಸಿತ್ತು. ಈವರೆಗೆ ಒಮ್ಮೆಯೂ ಬತ್ತಿಲ್ಲ ಎಂದು ಹೇಳಿದರು.</p>.<p>ಸಿದ್ಧರಾಮೇಶ್ವರರು ಭಕ್ತರ ಉದ್ಧಾರಕ್ಕೆ ಬದುಕು ಸವೆಸಿದ್ದರು. ಅವರ ಸಮಾಜೋಧಾರ್ಮಿಕ ಕಾರ್ಯಗಳ ಹೆಚ್ಚು ಹೆಚ್ಚು ಪ್ರಚಾರ ಆಗಬೇಕಾಗಿದೆ ಎಂದು ತಿಳಿಸಿದರು.</p>.<p>ಇದಕ್ಕೂ ಮುನ್ನ ಅವರು ಬಾವಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಹಿಳೆಯರು ಸೇರಿದಂತೆ ಗ್ರಾಮದ ನೂರಾರು ಜನ ಶ್ರದ್ಧೆ, ಭಕ್ತಿಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<p>ನಂತರ ನಡೆದ ಧರ್ಮಸಭೆಯಲ್ಲಿ ಶಿರೂರಿನ ಜಯಸಿದ್ಧೇಶ್ವರ ಸ್ವಾಮೀಜಿ ‘ಜೀವನ ದರ್ಶನ' ಕುರಿತು ಪ್ರವಚನ<br />ನೀಡಿದರು. ಮಠದ ಪೀಠಾಧಿಪತಿ ಹಾವಗಿಲಿಂಗೇಶ್ವರ ಶಿವಾಚಾರ್ಯ ಸಾನ್ನಿಧ್ಯ ವಹಿಸಿದ್ದರು.</p>.<p>ಠಾಣಾಕುಶನೂರದ ಸೂರ್ಯಕಾಂತ ಸ್ವಾಮಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪದ್ಮಾವತಿ, ಬೀರಿ(ಬಿ) ಗ್ರಾಮದ ಬಾಬುರಾವ್ ಬಿರಾದಾರ, ಮಲ್ಲಿಕಾರ್ಜುನ ಬಿರಾದಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಬರಗಾಲದ ವೇಳೆ ಸಿದ್ಧರಾಮೇಶ್ವರರು ಜನರ ಕುಡಿಯುವ ನೀರಿನ ಬವಣೆ ತಪ್ಪಿಸಿದ್ದರು ಎಂದು ಗುರು ರಾಚೋಟೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಹಾವಗಿಲಿಂಗೇಶ್ವರ ಶಿವಾಚಾರ್ಯ ನುಡಿದರು.</p>.<p>ಭಾಲ್ಕಿ ತಾಲ್ಲೂಕಿನ ಹಲಬರ್ಗಾ ಗ್ರಾಮದ ಗುರು ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ ಸಿದ್ಧರಾಮೇಶ್ವರ ಜಾತ್ರೆ ಪ್ರಯುಕ್ತ ಗಂಗಾ ಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>1972 ರಲ್ಲಿ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಉಂಟಾಗಿತ್ತು. ಜನ ಹನಿ ಹನಿ ನೀರಿಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಜನರ ಸಂಕಷ್ಟಕ್ಕೆ ಮರುಗಿದ ಸಿದ್ಧರಾಮೇಶ್ವರರು ಸ್ವತಃ ಬಾವಿ ತೋಡಿದ್ದರು ಎಂದು ತಿಳಿಸಿದರು.</p>.<p>ಅವರು ತೋಡಿದ್ದ 19 ಅಡಿ ಆಳದ ಬಾವಿ ಜನರ ಬಾಯಾರಿಕೆ ನೀಗಿಸಿತ್ತು. ಈವರೆಗೆ ಒಮ್ಮೆಯೂ ಬತ್ತಿಲ್ಲ ಎಂದು ಹೇಳಿದರು.</p>.<p>ಸಿದ್ಧರಾಮೇಶ್ವರರು ಭಕ್ತರ ಉದ್ಧಾರಕ್ಕೆ ಬದುಕು ಸವೆಸಿದ್ದರು. ಅವರ ಸಮಾಜೋಧಾರ್ಮಿಕ ಕಾರ್ಯಗಳ ಹೆಚ್ಚು ಹೆಚ್ಚು ಪ್ರಚಾರ ಆಗಬೇಕಾಗಿದೆ ಎಂದು ತಿಳಿಸಿದರು.</p>.<p>ಇದಕ್ಕೂ ಮುನ್ನ ಅವರು ಬಾವಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಹಿಳೆಯರು ಸೇರಿದಂತೆ ಗ್ರಾಮದ ನೂರಾರು ಜನ ಶ್ರದ್ಧೆ, ಭಕ್ತಿಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<p>ನಂತರ ನಡೆದ ಧರ್ಮಸಭೆಯಲ್ಲಿ ಶಿರೂರಿನ ಜಯಸಿದ್ಧೇಶ್ವರ ಸ್ವಾಮೀಜಿ ‘ಜೀವನ ದರ್ಶನ' ಕುರಿತು ಪ್ರವಚನ<br />ನೀಡಿದರು. ಮಠದ ಪೀಠಾಧಿಪತಿ ಹಾವಗಿಲಿಂಗೇಶ್ವರ ಶಿವಾಚಾರ್ಯ ಸಾನ್ನಿಧ್ಯ ವಹಿಸಿದ್ದರು.</p>.<p>ಠಾಣಾಕುಶನೂರದ ಸೂರ್ಯಕಾಂತ ಸ್ವಾಮಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪದ್ಮಾವತಿ, ಬೀರಿ(ಬಿ) ಗ್ರಾಮದ ಬಾಬುರಾವ್ ಬಿರಾದಾರ, ಮಲ್ಲಿಕಾರ್ಜುನ ಬಿರಾದಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>