ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‍ನಿಂದ ಮೌನ ಪ್ರತಿಭಟನೆ

ಹಾಥರಸ್ ಅತ್ಯಾಚಾರ ಪ್ರಕರಣಕ್ಕೆ ತೀವ್ರ ಖಂಡನೆ
Last Updated 6 ಅಕ್ಟೋಬರ್ 2020, 13:55 IST
ಅಕ್ಷರ ಗಾತ್ರ

ಬೀದರ್: ಉತ್ತರಪ್ರದೇಶದ ಹಾಥರಸ್‍ನಲ್ಲಿ ನಡೆದ ಯುವತಿಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಮೌನ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದಲ್ಲಿ ಶಾಮಿಯಾನ ಹಾಕಿ ಮೌನ ಪ್ರತಿಭಟನೆ ನಡೆಸುವ ಮೂಲಕ ಗಮನ ಸೆಳೆದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಬೀದರ್ ಶಾಸಕ ರಹೀಂಖಾನ್ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.

ಹಾಥರಸ್‍ನಲ್ಲಿ 19 ವರ್ಷದ ಯುವತಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ. ಶವವನ್ನು ಸುಟ್ಟು ಹಾಕಿ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಲಾಗಿದೆ ಎಂದು ಆರೋಪಿಸಿದರು.

ಮುಖಂಡ ರಾಹುಲ್ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಅವರು ಸಂತ್ರಸ್ತ ಕುಟುಂಬಕ್ಕೆ ಭೇಟಿ ಮಾಡಲು ಹೋದಾಗ ಪೊಲೀಸರು ಅವರನ್ನು ತಡೆದು, ತಳ್ಳಾಟ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎಂದು ಆಪಾದಿಸಿದರು.

ಬಿಜೆಪಿ ಆಡಳಿತದಲ್ಲಿ ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ಆಗುತ್ತಿದೆ. ವಿರೋಧ ಪಕ್ಷಗಳನ್ನು ಬಗ್ಗು ಬಡಿಯಲು ಎಲ್ಲ ಪ್ರಯತ್ನ ನಡೆಸಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿರುವುದು ಕೂಡ ಇದರ ಭಾಗವೇ ಆಗಿದೆ ಎಂದು ಟೀಕಿಸಿದರು.

ವಿರೋಧ ಪಕ್ಷಗಳನ್ನು ಹಣೆಯುವ ಬಿಜೆಪಿಯ ಪ್ರಯತ್ನ ಕೈಗೂಡುವುದಿಲ್ಲ. ನಾವು ಅದಕ್ಕೆ ಅಂಜುವುದಿಲ್ಲ ಎಂದು ಹೇಳಿದರು.

ಹಾಥರಸ್ ಅತ್ಯಾಚಾರ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.

ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಪುಂಡಲೀಕರಾವ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ದತ್ತಾತ್ರಿ ಮೂಲಗೆ, ಎಂ.ಎ. ಸಮಿ, ಮುಖಂಡರಾದ ಶಿವರಾಜ ಹಾಸನಕರ್, ರಾಜಶೇಖರ ಪಾಟೀಲ ಅಷ್ಟೂರ, ಅಮೃತರಾವ್ ಚಿಮಕೋಡೆ, ರೋಹಿದಾಸ ಘೋಡೆ, ಮುರಳಿಧರ ಎಕಲಾರಕರ್, ಶಂಕರ ರೆಡ್ಡಿ ಚಿಟ್ಟಾ, ಇರ್ಷಾದ್ ಅಲಿ ಪೈಲ್ವಾನ್, ಸಂಜುಕುಮಾರ ಡಿ.ಕೆ., ಜಾರ್ಜ್ ಫರ್ನಾಂಡೀಸ್, ಪರ್ವೇಜ್ ಕಮಲ್, ಅಜಮತ್ ಪಟೇಲ್ ಮೊದಲಾದವರು ಇದ್ದರು.

ಹಾಥರಸ್ ಅತ್ಯಾಚಾರ ಪ್ರಕರಣದ ಯುವತಿಯ ಆತ್ಮಕ್ಕೆ ಶಾಂತಿ ಕೋರಿ ಎರಡು ನಿಮಿಷಗಳ ಮೌನ ಆಚರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT