ಬೀದರ್: ಕೆಪಿಸಿಸಿ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯ ಘಟಕದ ಉಪಾಧ್ಯಕ್ಷ ಶಿವಶರಣ ಬಿರಾದಾರ ನೀಡಿರುವ ಬೆಳ್ಳಿ ಖಡ್ಗವನ್ನು ಹರಾಜು ಹಾಕಿ ಅದರಿಂದ ಬಂದ ಹಣವನ್ನು ತಾಲ್ಲೂಕಿನಲ್ಲಿ ಪಕ್ಷದ ಕಚೇರಿ ಕಟ್ಟಲು ಬಳಸಿಕೊಳ್ಳಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ನಗರದಲ್ಲಿ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು. ‘ಪಕ್ಷದ ಕಚೇರಿಯೇ ನಮ್ಮ ದೇವಸ್ಥಾನ. ಅದನ್ನು ಮೊದಲು ನಿರ್ಮಿಸಿಕೊಳ್ಳಬೇಕಿದೆ’ ಎಂದು ತಿಳಿಸಿದರು.
‘ಪಕ್ಷವೇ ನಮ್ಮ ಧರ್ಮ, ಕಾಂಗ್ರೆಸ್ ಧ್ವಜವೇ ನಮ್ಮ ಧರ್ಮ ಧ್ವಜ. ಈ ಧರ್ಮ ಧ್ವಜದ ಅಡಿಯಲ್ಲಿ ಎಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸಬೇಕು’ ಎಂದು ಮನವಿ ಮಾಡಿದರು.