ಕೋವಿಡ್ ಮೂರನೇ ಅಲೆಯ ತಡೆಗೆ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಹೀಗಾಗಿ ಪಲ್ಲಕ್ಕಿ ಉತ್ಸವವನ್ನು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಸಂಪ್ರದಾಯದ ಪ್ರಕಾರ ಸರಳವಾಗಿ ಆಚರಿಸಬೇಕು ಎಂದು ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಸೂಚಿಸಿದ್ದಾರೆ ಎಂದು ಮೈಲಾರ ಮಲ್ಲಣ್ಣ ಖಂಡೋಬಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅನಂತರಾವ್ ಕುಲಕರ್ಣಿ ತಿಳಿಸಿದ್ದಾರೆ.