ಜನವಾಡ: ಮಳೆಯಿಂದಾಗಿ ಬೀದರ್ ತಾಲ್ಲೂಕಿನ ಸಿರ್ಸಿ ಔರಾದ್- ಬಾವಗಿ ರಸ್ತೆಯಲ್ಲಿ ಇರುವ ಸೇತುವೆ ಕುಸಿದು ಬಿದ್ದಿದೆ.
ಬೀದರ್ ದಕ್ಷಿಣ ಶಾಸಕ ಬಂಡೆಪ್ಪ ಕಾಶೆಂಪೂರ್ ಅವರು ಸೇತುವೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆದಷ್ಟು ಬೇಗ ಸೇತುವೆ ದುರಸ್ತಿಪಡಿಸಬೇಕು. ಅಲ್ಲಿಯವರೆಗೆ ಸಂಚಾರಕ್ಕೆ ತಾತ್ಕಾಲಿಕ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಲಿಂಗರಾಜ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ ಖಂಡ್ರೆ, ಕಿರಿಯ ಎಂಜಿನಿಯರ್ ಕುಪೇಂದ್ರ, ರಾಜಶೇಖರ, ಮುಖಂಡರಾದ ರವಿ, ಧೂಳಪ್ಪ ಇದ್ದರು.