<p><strong>ಹುಲಸೂರ</strong>: ಮಕ್ಕಳು ತಮ್ಮ ಭವಿಷ್ಯವನ್ನು ಉಜ್ವಲ ಮಾಡಿಕೊಳ್ಳಬೇಕಾದರೆ ಕೌಶಲ ಆಧಾರಿತ ಶಿಕ್ಷಣ ಪಡೆಯುವುದು ಅತಿ ಅವಶ್ಯಕವಾಗಿದೆ ಎಂದು ಬಸವೇಶ್ವರ ಕೈಕಾರಿಕೆ ತರಬೇತಿ ಸಂಸ್ಥೆಯ ಪ್ರಾಚಾರ್ಯ ಜ್ಞಾನರೆಡ್ಡಿ ಬೋಳಿಂಗೆ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್.ಎಫ್.ಕ್ಯೂ.ಎಫ್ ಯೋಜನೆಯ ಅಡಿಯಲ್ಲಿ 2024-25ನೇ ಸಾಲಿನ ಮಾಹಿತಿ ತಂತ್ರಜ್ಞಾನ ಕೋರ್ಸ್ ಮಕ್ಕಳಿಗೆ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪದವಿ ಪಡೆದರೆ ಉಪಯೋಗವಾಗುವುದಿಲ್ಲ. ಪದವಿಯ ಅರ್ಹತೆಗೆ ತಕ್ಕಂತೆ ಕೌಶಲ ವೃದ್ಧಿಯಾಗಬೇಕು. ಜಗತ್ತಿನಲ್ಲಿ ಐ.ಟಿ ಕ್ಷೇತ್ರವು ತೀವ್ರವಾಗಿ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮಾಹಿತಿ ತಂತ್ರಜ್ಞಾನದ ಅವಶ್ಯಕತೆ ಬಹಳಷ್ಟಿದೆ’ ಎಂದರು.</p>.<p>‘ಮಾನವ ಇಂದು ಪ್ರತಿ ಹಂತದಲ್ಲಿಯೂ ಸಹ ಮಾಹಿತಿ ತಂತ್ರಜ್ಞಾನದ ಮೇಲೆ ಅವಲಂಬಿಸಿ ಜೀವನ ಮಾಡುತ್ತಿದ್ದಾನೆ. ಮಕ್ಕಳು ಎಸ್ಎಸ್ಎಲ್ಸಿ ನಂತರ ವೃತ್ತಿ ಶಿಕ್ಷಣ ಕೋರ್ಸಾದ ಕೈಗಾರಿಕೆ ತರಬೇತಿ ಆಯ್ಕೆ ಮಾಡಿಕೊಳ್ಳುವ ಮೂಲಕ ಉದ್ಯೋಗದ ಹೆಚ್ಚಿನ ಅವಕಾಶಗಳನ್ನು ಪಡೆಯಬಹುದು’ ಎಂದು ಹೇಳಿದರು.</p>.<p>ಆಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕ ಸೂರ್ಯಕಾಂತ ಪಾಟೀಲ ಮಾತನಾಡಿ, ‘ನಮ್ಮ ಶಾಲೆಯಲ್ಲಿ 2024-25ನೇ ಸಾಲಿನಲ್ಲಿ ಎ.ಪಿ.ಬಿ ಅನುಮೋದಿತ ಎನ್.ಎಸ್.ಕ್ಯೂ.ಎಫ್ ಯೋಜನೆಯಡಿ ಮಕ್ಕಳಿಗೆ ಮಾಹಿತಿ ತಂತ್ರಜ್ಞಾನದ ತರಬೇತಿ ನೀಡಲಾಗುತ್ತಿದೆ’ ಎಂದರು.</p>.<p>ಶಿಕ್ಷಕರಾದ ದೇವಾನಂದ ನಂಜವಾಡೆ, ಎಂ.ಡಿ. ಆಜಮ್, ರುಹೂಲ ಅಮೀನ್, ಪರ್ವೇಜ ಮೋಮಿನ್, ಅಹಮದ ಅಲಿ ಅಹಮದ, ಸರೀತಾ ಮೇತ್ರೆ, ಹೀರಾಬಾಯಿ ಸದಾಶಿವ ಬಿರಾದಾರ ಭಾಗವಹಿಸಿದ್ದರು. ವಿದ್ಯಾರ್ಥಿನಿ ಸೃಷ್ಟಿ ನಿರೂಪಿಸಿದರು. ಕಾಶಿ ಧನರಾದ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಲಸೂರ</strong>: ಮಕ್ಕಳು ತಮ್ಮ ಭವಿಷ್ಯವನ್ನು ಉಜ್ವಲ ಮಾಡಿಕೊಳ್ಳಬೇಕಾದರೆ ಕೌಶಲ ಆಧಾರಿತ ಶಿಕ್ಷಣ ಪಡೆಯುವುದು ಅತಿ ಅವಶ್ಯಕವಾಗಿದೆ ಎಂದು ಬಸವೇಶ್ವರ ಕೈಕಾರಿಕೆ ತರಬೇತಿ ಸಂಸ್ಥೆಯ ಪ್ರಾಚಾರ್ಯ ಜ್ಞಾನರೆಡ್ಡಿ ಬೋಳಿಂಗೆ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್.ಎಫ್.ಕ್ಯೂ.ಎಫ್ ಯೋಜನೆಯ ಅಡಿಯಲ್ಲಿ 2024-25ನೇ ಸಾಲಿನ ಮಾಹಿತಿ ತಂತ್ರಜ್ಞಾನ ಕೋರ್ಸ್ ಮಕ್ಕಳಿಗೆ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪದವಿ ಪಡೆದರೆ ಉಪಯೋಗವಾಗುವುದಿಲ್ಲ. ಪದವಿಯ ಅರ್ಹತೆಗೆ ತಕ್ಕಂತೆ ಕೌಶಲ ವೃದ್ಧಿಯಾಗಬೇಕು. ಜಗತ್ತಿನಲ್ಲಿ ಐ.ಟಿ ಕ್ಷೇತ್ರವು ತೀವ್ರವಾಗಿ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮಾಹಿತಿ ತಂತ್ರಜ್ಞಾನದ ಅವಶ್ಯಕತೆ ಬಹಳಷ್ಟಿದೆ’ ಎಂದರು.</p>.<p>‘ಮಾನವ ಇಂದು ಪ್ರತಿ ಹಂತದಲ್ಲಿಯೂ ಸಹ ಮಾಹಿತಿ ತಂತ್ರಜ್ಞಾನದ ಮೇಲೆ ಅವಲಂಬಿಸಿ ಜೀವನ ಮಾಡುತ್ತಿದ್ದಾನೆ. ಮಕ್ಕಳು ಎಸ್ಎಸ್ಎಲ್ಸಿ ನಂತರ ವೃತ್ತಿ ಶಿಕ್ಷಣ ಕೋರ್ಸಾದ ಕೈಗಾರಿಕೆ ತರಬೇತಿ ಆಯ್ಕೆ ಮಾಡಿಕೊಳ್ಳುವ ಮೂಲಕ ಉದ್ಯೋಗದ ಹೆಚ್ಚಿನ ಅವಕಾಶಗಳನ್ನು ಪಡೆಯಬಹುದು’ ಎಂದು ಹೇಳಿದರು.</p>.<p>ಆಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕ ಸೂರ್ಯಕಾಂತ ಪಾಟೀಲ ಮಾತನಾಡಿ, ‘ನಮ್ಮ ಶಾಲೆಯಲ್ಲಿ 2024-25ನೇ ಸಾಲಿನಲ್ಲಿ ಎ.ಪಿ.ಬಿ ಅನುಮೋದಿತ ಎನ್.ಎಸ್.ಕ್ಯೂ.ಎಫ್ ಯೋಜನೆಯಡಿ ಮಕ್ಕಳಿಗೆ ಮಾಹಿತಿ ತಂತ್ರಜ್ಞಾನದ ತರಬೇತಿ ನೀಡಲಾಗುತ್ತಿದೆ’ ಎಂದರು.</p>.<p>ಶಿಕ್ಷಕರಾದ ದೇವಾನಂದ ನಂಜವಾಡೆ, ಎಂ.ಡಿ. ಆಜಮ್, ರುಹೂಲ ಅಮೀನ್, ಪರ್ವೇಜ ಮೋಮಿನ್, ಅಹಮದ ಅಲಿ ಅಹಮದ, ಸರೀತಾ ಮೇತ್ರೆ, ಹೀರಾಬಾಯಿ ಸದಾಶಿವ ಬಿರಾದಾರ ಭಾಗವಹಿಸಿದ್ದರು. ವಿದ್ಯಾರ್ಥಿನಿ ಸೃಷ್ಟಿ ನಿರೂಪಿಸಿದರು. ಕಾಶಿ ಧನರಾದ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>