ರಿಲಯನ್ಸ್ ಫೌಂಡೇಷನ್ ಸಹಯೋಗದಲ್ಲಿ ಪಂಚಾಯಿತಿಯು 100ಕ್ಕೂ ಹೆಚ್ಚು ತೆರೆದ ಬಾವಿ ಕೊರೆದಿದೆ. ಅಂತರ್ಜಲಮಟ್ಟ ವೃದ್ಧಿಸಿದೆ. ಸ್ವಚ್ಛ ಭಾರತ ಯೋಜನೆ ಅನುಷ್ಠಾನಗೊಳಿಸುವಲ್ಲಿ ಮಾದರಿಯಾಗಿದೆ. ಬೋಗನಾ ಸೇರಿದಂತೆ ವಿವಿಧ ಗ್ರಾಮದಲ್ಲಿ ಶೌಚಾಲಯ ನಿರ್ಮಾಣದಲ್ಲೂ ಪ್ರಮುಖ ಪಾತ್ರ ವಹಿಸಿದೆ. ‘ಬೇರೆ ಬೇರೆ ಕಡೆ ಈ ಊರಿನ ಮಾದರಿ ಅನುಸರಿಸಲಾಗಿದೆ. ಎಲ್ಲವನ್ನೂ ಪರಿಗಣಿಸಿ ನಮ್ಮ ಪಂಚಾ ಯಿತಿಗೆ ಪ್ರಶಸ್ತಿ ಬಂದಿರುವುದು ಆತ್ಮಬಲ ಹೆಚ್ಚಿಸಿದೆ. ಇನ್ನಷ್ಟು ಕೆಲಸ ಮಾಡಲು ಪ್ರೇರಣೆ ಸಿಕ್ಕಿದೆ’ ಎಂದು ಪಿಡಿಒ ಸಂತೋಷ ಪಾಟೀಲ ತಿಳಿಸಿದರು.