<p>ಬೀದರ್: ಜನರಿಗೆ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಸಹಕಾರ ರಂಗ ಮಾದರಿಯಾಗಿದೆ ಎಂದು ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಮಹಾಜನ ನುಡಿದರು.</p>.<p>ನಗರದ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಸಹಾರ್ದ ತರಬೇತಿ ಸಂಸ್ಥೆಯಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರಿಗೆ ನಬಾರ್ಡ್ ವತಿಯಿಂದ ಹಮ್ಮಿಕೊಂಡಿರುವ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಹಕಾರ ರಂಗವು ಎಲ್ಲ ವರ್ಗದ ಜನರನ್ನು ಒಳಗೊಂಡ ಆಂದೋಲನವಾಗಿದೆ. ಎಲ್ಲರಿಗೂ ಸಮಾನ ಅವಕಾಶ ಸೃಷ್ಟಿಸಲು ಸಹಕಾರಿಯಾಗಿದೆ. ಕೃಷಿ ಹಾಗೂ ಇತರ ಕ್ಷೇತ್ರಗಳಲ್ಲಿ ಸಹಕಾರ ರಂಗದ ಸಾಧನೆಗಳು ಉನ್ನತವಾಗಿವೆ ಎಂದು ಹೇಳಿದರು.</p>.<p>ಆಡಳಿತ ಮಂಡಳಿಯಲ್ಲಿ ಕೌಟುಂಬಿಕ ಭಾವನೆ ಮೂಡಿದ್ದಲ್ಲಿ ಸಹಕಾರ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದು ತಿಳಿಸಿದರು.<br />ಉಪನ್ಯಾಸಕ ಮಂಜುನಾಥ ಭಾಗವತ್ ತರಬೇತಿ ಉದ್ದೇಶ ವಿವರಿಸಿದರು. ಶಿವಮೊಗ್ಗ ಸಹಕಾರ ಸಂಘದ ಅಧ್ಯಕ್ಷ ನೀಲಪ್ಪ ಉಪಸ್ಥಿತರಿದ್ದರು.<br />ಸಹಾರ್ದ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ಸ್ವಾಗತಿಸಿದರು. ಅನಿಲ್ ಪಿ. ನಿರೂಪಿಸಿದರು. ಎಸ್.ಜಿ. ಪಾಟೀಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಜನರಿಗೆ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಸಹಕಾರ ರಂಗ ಮಾದರಿಯಾಗಿದೆ ಎಂದು ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಮಹಾಜನ ನುಡಿದರು.</p>.<p>ನಗರದ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಸಹಾರ್ದ ತರಬೇತಿ ಸಂಸ್ಥೆಯಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರಿಗೆ ನಬಾರ್ಡ್ ವತಿಯಿಂದ ಹಮ್ಮಿಕೊಂಡಿರುವ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಹಕಾರ ರಂಗವು ಎಲ್ಲ ವರ್ಗದ ಜನರನ್ನು ಒಳಗೊಂಡ ಆಂದೋಲನವಾಗಿದೆ. ಎಲ್ಲರಿಗೂ ಸಮಾನ ಅವಕಾಶ ಸೃಷ್ಟಿಸಲು ಸಹಕಾರಿಯಾಗಿದೆ. ಕೃಷಿ ಹಾಗೂ ಇತರ ಕ್ಷೇತ್ರಗಳಲ್ಲಿ ಸಹಕಾರ ರಂಗದ ಸಾಧನೆಗಳು ಉನ್ನತವಾಗಿವೆ ಎಂದು ಹೇಳಿದರು.</p>.<p>ಆಡಳಿತ ಮಂಡಳಿಯಲ್ಲಿ ಕೌಟುಂಬಿಕ ಭಾವನೆ ಮೂಡಿದ್ದಲ್ಲಿ ಸಹಕಾರ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದು ತಿಳಿಸಿದರು.<br />ಉಪನ್ಯಾಸಕ ಮಂಜುನಾಥ ಭಾಗವತ್ ತರಬೇತಿ ಉದ್ದೇಶ ವಿವರಿಸಿದರು. ಶಿವಮೊಗ್ಗ ಸಹಕಾರ ಸಂಘದ ಅಧ್ಯಕ್ಷ ನೀಲಪ್ಪ ಉಪಸ್ಥಿತರಿದ್ದರು.<br />ಸಹಾರ್ದ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ಸ್ವಾಗತಿಸಿದರು. ಅನಿಲ್ ಪಿ. ನಿರೂಪಿಸಿದರು. ಎಸ್.ಜಿ. ಪಾಟೀಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>