ಬೀದರ್ನ ಸರಸ್ವತಿ ಶಾಲೆಯ ಚಿತ್ರಕಲಾ ಶಿಕ್ಷಕಿ ಸಂಗೀತಾ ದುನಗೆ ಅವರು ರಂಗೋಲಿಯ ಮೂಲಕ ಜೀವ ತುಂಬಿದ, ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಚಿತ್ರ ಕಲಾಸಕ್ತರ ಮನ ಸೆಳೆಯಿತು. ರಂಗೋಲಿಯಲ್ಲಿ ಹೆಣ್ಣು ಭ್ರೂಣಹತ್ಯೆ ತಡೆ, ಬಾಲಕಿಯರ ಶಿಕ್ಷಣ, ಮಹಿಳಾ ಸಬಲೀಕರಣದ ಸಂದೇಶ ಅರ್ಥಪೂರ್ಣವಾಗಿ ಮೂಡಿ ಬಂದಿತು. ಸಾವಿತ್ರಿಬಾಯಿ ಫುಲೆ ಭಾವಚಿತ್ರದ ಹಿಂಬದಿ ಮೂಡಿಸಿದ ಗರಿ ಬಿಚ್ಚಿದ ನವಿಲಿನ ಚಿತ್ರ ಮಹಿಳೆಯರು ತಮ್ಮ ಬದುಕಿನಲ್ಲಿ ಶಿಕ್ಷಣದ ಮೂಲಕವೇ ಪ್ರಗತಿ ಸಾಧಿಸಲು ಸಾಧ್ಯ ಎನ್ನುವುದನ್ನು ಬಿಂಬಿಸಿತು.