ಯುಪಿಸಿಎಲ್ ಅದಾನಿ ಪವರ್ ಕಾರ್ಪೊರೇಷನ್ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಮತ್ತು ಪ್ರೊ ಕಬಡ್ಡಿ ಲೀಗ್ನ ರಾಷ್ಟ್ರೀಯ ಆಟಗಾರ, ತರಬೇತುದಾರ ಜಗದೀಶ್ ಕುಂಬ್ಳೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ವಿಮೆನ್ಸ್ ನ್ಯಾಷನಲ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಕುಡ್ಪಿ ಜಗದೀಶ್ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಮಣೇಲ್ ಅಣ್ಣಪ್ಪ ನಾಯಕ್, ಸದಸ್ಯರಾದ ರಾಘವ ಕಾಮತ್, ನಗರ ನಾರಾಯಣ ಶೆಣೈ, ಸುರೇಶ್ ಮಲ್ಯ, ಸತೀಶ್ ಭಟ್ ಉಪಸ್ಥಿತರಿದ್ದರು.