‘ಈಗಾಗಲೇ ಹಲವು ರೈತರು ಜಮೀನು ಕೊಡಲು ಮುಂದೆ ಬಂದಿದ್ದಾರೆ. ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಸೋಲಾರ್ ಪಾರ್ಕ್ ವಿರುದ್ಧ ರೈತರನ್ನು ಎತ್ತಿ ಕಟ್ಟಿ ಅದಕ್ಕೆ ತಡೆಯೊಡ್ಡಬಾರದು. ಈ ಹಿಂದೆ ಔರಾದ್ನಲ್ಲಿ ₹800 ಕೋಟಿ ವೆಚ್ಚದಲ್ಲಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಕ್ಯಾಂಪ್ ಆರಂಭಿಸಲು ಯೋಜಿಸಲಾಗಿತ್ತು. ಆದರೆ, ಏಳು ವರ್ಷಗಳ ಹಿಂದೆ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಸಚಿವರಾಗಿದ್ದ ಈಶ್ವರ ಖಂಡ್ರೆಯವರು ಅದಕ್ಕೆ ಜಮೀನು ಕೊಟ್ಟಿರಲಿಲ್ಲ. ಇದರಿಂದಾಗಿ ಅದು ಬೇರೆ ರಾಜ್ಯಕ್ಕೆ ಮಂಜೂರಾಯಿತು’ ಎಂದು ದೂರಿದರು.