<p>ಬೀದರ್: ಬೀದರ್ಗೆ ಸೈನಿಕ ಶಾಲೆ ಮಂಜೂರು ಮಾಡಬೇಕು ಎನ್ನುವ ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರ ಬೇಡಿಕೆಗೆ ಕೇಂದ್ರದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.<br />ನವದೆಹಲಿಯಲ್ಲಿ ಅವರನ್ನು ಭೇಟಿಯಾಗಿ ಮಾಡಿದ ಮನವಿ ಹಿನ್ನೆಲೆಯಲ್ಲಿ ಸೈನಿಕ ಶಾಲೆ ಆರಂಭಿಸುವ ದಿಸೆಯಲ್ಲಿ ವರದಿ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಖೂಬಾ ತಿಳಿಸಿದ್ದಾರೆ.<br /><br />ಬೀದರ್ ತೆಲಂಗಾಣ ಹಾಗೂ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿದೆ. ಇಲ್ಲಿಯ ವಾಯುಪಡೆ ತರಬೇತಿ ಕೇಂದ್ರದಲ್ಲಿ ಯುದ್ಧ ವಿಮಾನಗಳ ತರಬೇತಿ ನೀಡಲಾಗುತ್ತದೆ. ಸೈನಿಕ ಶಾಲೆ ಆರಂಭಿಸಲು ಎಲ್ಲ ರೀತಿಯ ಅನುಕೂಲತೆಗಳು ಇವೆ ಎಂದು ರಾಜನಾಥ್ ಸಿಂಗ್ ಅವರಿಗೆ ಮನವರಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.<br /><br />ಎಚ್.ಕೆ.ಇ. ಸಂಸ್ಥೆಯ ಬಿ.ವಿ.ಬಿ. ಕಾಲೇಜು 20 ಎಕರೆ ಪ್ರದೇಶದಲ್ಲಿ ಇದೆ. ಸಂಸ್ಥೆಯವರು ಸೈನಿಕ ಶಾಲೆಗೆ ಜಮೀನು ಕೊಡಲು ಸಿದ್ಧರಿದ್ದಾರೆ. ಇನ್ನೂ 32 ಎಕರೆ ಜಮೀನು ಲಭ್ಯ ಇದೆ. ಈ ಭಾಗದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗಾಗಿ ಸಾರ್ವಜನಿಕ ಹಾಗೂ ಖಾಸಗಿ ಸಹ ಭಾಗಿತ್ವದಲ್ಲಿ ಸೈನಿಕ ಶಾಲೆ ಆರಂಭಿಸಲು ಕೋರಲಾಗಿದೆ ಎಂದು ತಿಳಿಸಿದ್ದಾರೆ.<br />ಎಚ್.ಕೆ.ಇ. ಸಂಸ್ಥೆಯ ಅಧ್ಯಕ್ಷ ಭೀಮಾಶಂಕರ ಬಿಲಗುಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಬೀದರ್ಗೆ ಸೈನಿಕ ಶಾಲೆ ಮಂಜೂರು ಮಾಡಬೇಕು ಎನ್ನುವ ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರ ಬೇಡಿಕೆಗೆ ಕೇಂದ್ರದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.<br />ನವದೆಹಲಿಯಲ್ಲಿ ಅವರನ್ನು ಭೇಟಿಯಾಗಿ ಮಾಡಿದ ಮನವಿ ಹಿನ್ನೆಲೆಯಲ್ಲಿ ಸೈನಿಕ ಶಾಲೆ ಆರಂಭಿಸುವ ದಿಸೆಯಲ್ಲಿ ವರದಿ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಖೂಬಾ ತಿಳಿಸಿದ್ದಾರೆ.<br /><br />ಬೀದರ್ ತೆಲಂಗಾಣ ಹಾಗೂ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿದೆ. ಇಲ್ಲಿಯ ವಾಯುಪಡೆ ತರಬೇತಿ ಕೇಂದ್ರದಲ್ಲಿ ಯುದ್ಧ ವಿಮಾನಗಳ ತರಬೇತಿ ನೀಡಲಾಗುತ್ತದೆ. ಸೈನಿಕ ಶಾಲೆ ಆರಂಭಿಸಲು ಎಲ್ಲ ರೀತಿಯ ಅನುಕೂಲತೆಗಳು ಇವೆ ಎಂದು ರಾಜನಾಥ್ ಸಿಂಗ್ ಅವರಿಗೆ ಮನವರಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.<br /><br />ಎಚ್.ಕೆ.ಇ. ಸಂಸ್ಥೆಯ ಬಿ.ವಿ.ಬಿ. ಕಾಲೇಜು 20 ಎಕರೆ ಪ್ರದೇಶದಲ್ಲಿ ಇದೆ. ಸಂಸ್ಥೆಯವರು ಸೈನಿಕ ಶಾಲೆಗೆ ಜಮೀನು ಕೊಡಲು ಸಿದ್ಧರಿದ್ದಾರೆ. ಇನ್ನೂ 32 ಎಕರೆ ಜಮೀನು ಲಭ್ಯ ಇದೆ. ಈ ಭಾಗದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗಾಗಿ ಸಾರ್ವಜನಿಕ ಹಾಗೂ ಖಾಸಗಿ ಸಹ ಭಾಗಿತ್ವದಲ್ಲಿ ಸೈನಿಕ ಶಾಲೆ ಆರಂಭಿಸಲು ಕೋರಲಾಗಿದೆ ಎಂದು ತಿಳಿಸಿದ್ದಾರೆ.<br />ಎಚ್.ಕೆ.ಇ. ಸಂಸ್ಥೆಯ ಅಧ್ಯಕ್ಷ ಭೀಮಾಶಂಕರ ಬಿಲಗುಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>