<p><strong>ಬೀದರ್: </strong>ರಾಜ್ಯದಲ್ಲಿ ಪ್ರಸ್ತುತ ವಿದ್ಯಾರ್ಥಿ ಸಮುದಾಯ ಎದುರಿಸುತ್ತಿರುವ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸಬೇಕು ಹಾಗೂ ಶಿಕ್ಷಣ ವಿರೋಧಿ ನೀತಿಗಳನ್ನು ಕೈಬಿಡಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಜಿಲ್ಲಾ ಘಟಕದ ಒತ್ತಾಯಿಸಿದೆ.</p>.<p>ಉತ್ತರಪ್ರದೇಶ, ಹರಿಯಾಣ, ಆಂಧ್ರಪ್ರದೇಶದಲ್ಲಿ ಎಲ್ಲ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪಿಯುಸಿಯಂತೆ ಎಸ್ಸೆಸ್ಸೆಲ್ಸಿ ಹಾಗೂ ಪದವಿ ಪರೀಕ್ಷೆಗಳನ್ನು ರದ್ದುಪಡಿಸಬೇಕು. ಡಿಪ್ಲೊಮಾ 1, 3 ಹಾಗೂ 5ನೇ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕು ಎಂದು ಆಗ್ರಹಿಸಿದೆ.</p>.<p>ಪದವಿಯ 1, 3 ಹಾಗೂ 5ನೇ ಸೆಮಿಸ್ಟರ್ ಪರೀಕ್ಷೆ ನಡೆಸದೇ 2, 4 ಮತ್ತು 6ನೇ ಸೆಮಿಸ್ಟರ್ ತರಗತಿಗಳನ್ನು ಆರಂಭಿಸಲಾಗಿದೆ. ಮುಂದಿನ ಪರೀಕ್ಷಾ ತಯಾರಿ ಯಾವ ಸೆಮಿಸ್ಟರ್ಗಾಗಿ ಮಾಡಬೇಕು ಎನ್ನುವ ಗೊಂದಲ ವಿದ್ಯಾರ್ಥಿಗಳಲ್ಲಿ ಮೂಡಿದೆ. ಹೀಗಾಗಿ ಹಿಂದಿನ ಸೆಮಿಸ್ಟರ್ ಪಾಸ್ ಮಾಡಿದ ನಂತರ ಮುಂದಿನ ತರಗತಿಗಳನ್ನು ನಡೆಸಬೇಕು ಎಂದು ಒತ್ತಾಯಿಸಿದೆ.</p>.<p>ಎರಡು ವರ್ಷಗಳ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಗತಿಗಳು ನಡೆದಿಲ್ಲ. ಆನ್ಲೈನ್ ಕ್ಲಾಸ್ಗಳನ್ನು ನಡೆಸಲಾಗುತ್ತಿದೆ ಆದರೂ ಪ್ರಾಯೋಗಿಕ ಅಭ್ಯಾಸಗಳು ಪ್ರಯೋಗ ಅಭ್ಯಾಸವಿಲ್ಲದೆ ಅರ್ಥವಾಗುವುದಿಲ್ಲ. ಇದು ಪ್ರಾಯೋಗಿಕ ವಿಷಯದಲ್ಲಿ ವಿದ್ಯಾರ್ಥಿಗಳು ಅನುತ್ತೀರ್ಣರಾಗಲು ಕಾರಣವಾಗುತ್ತದೆ. ಈ ಸಮಸ್ಯೆಯನ್ನು ಇತ್ಯರ್ಥಪಡಿಸಬೇಕು ಎಂದು ಮನವಿ ಮಾಡಿದೆ.</p>.<p>ಮುಖ್ಯಮಂತ್ರಿಗೆ ಬರೆದ ಮನವಿಪತ್ರವನ್ನು ಎಸ್ಎಫ್ಐ ಜಿಲ್ಲಾ ಘಟಕದ ಅಧ್ಯಕ್ಷ ಅರುಣ ಕೊಡಗೆ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು. ಉಪಾಧ್ಯಕ್ಷ ಅಮರ್ ಗಾದಗಿ, ಕಾರ್ಯದರ್ಶಿ ಅವಿನಾಶ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ರಾಜ್ಯದಲ್ಲಿ ಪ್ರಸ್ತುತ ವಿದ್ಯಾರ್ಥಿ ಸಮುದಾಯ ಎದುರಿಸುತ್ತಿರುವ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸಬೇಕು ಹಾಗೂ ಶಿಕ್ಷಣ ವಿರೋಧಿ ನೀತಿಗಳನ್ನು ಕೈಬಿಡಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಜಿಲ್ಲಾ ಘಟಕದ ಒತ್ತಾಯಿಸಿದೆ.</p>.<p>ಉತ್ತರಪ್ರದೇಶ, ಹರಿಯಾಣ, ಆಂಧ್ರಪ್ರದೇಶದಲ್ಲಿ ಎಲ್ಲ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪಿಯುಸಿಯಂತೆ ಎಸ್ಸೆಸ್ಸೆಲ್ಸಿ ಹಾಗೂ ಪದವಿ ಪರೀಕ್ಷೆಗಳನ್ನು ರದ್ದುಪಡಿಸಬೇಕು. ಡಿಪ್ಲೊಮಾ 1, 3 ಹಾಗೂ 5ನೇ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕು ಎಂದು ಆಗ್ರಹಿಸಿದೆ.</p>.<p>ಪದವಿಯ 1, 3 ಹಾಗೂ 5ನೇ ಸೆಮಿಸ್ಟರ್ ಪರೀಕ್ಷೆ ನಡೆಸದೇ 2, 4 ಮತ್ತು 6ನೇ ಸೆಮಿಸ್ಟರ್ ತರಗತಿಗಳನ್ನು ಆರಂಭಿಸಲಾಗಿದೆ. ಮುಂದಿನ ಪರೀಕ್ಷಾ ತಯಾರಿ ಯಾವ ಸೆಮಿಸ್ಟರ್ಗಾಗಿ ಮಾಡಬೇಕು ಎನ್ನುವ ಗೊಂದಲ ವಿದ್ಯಾರ್ಥಿಗಳಲ್ಲಿ ಮೂಡಿದೆ. ಹೀಗಾಗಿ ಹಿಂದಿನ ಸೆಮಿಸ್ಟರ್ ಪಾಸ್ ಮಾಡಿದ ನಂತರ ಮುಂದಿನ ತರಗತಿಗಳನ್ನು ನಡೆಸಬೇಕು ಎಂದು ಒತ್ತಾಯಿಸಿದೆ.</p>.<p>ಎರಡು ವರ್ಷಗಳ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಗತಿಗಳು ನಡೆದಿಲ್ಲ. ಆನ್ಲೈನ್ ಕ್ಲಾಸ್ಗಳನ್ನು ನಡೆಸಲಾಗುತ್ತಿದೆ ಆದರೂ ಪ್ರಾಯೋಗಿಕ ಅಭ್ಯಾಸಗಳು ಪ್ರಯೋಗ ಅಭ್ಯಾಸವಿಲ್ಲದೆ ಅರ್ಥವಾಗುವುದಿಲ್ಲ. ಇದು ಪ್ರಾಯೋಗಿಕ ವಿಷಯದಲ್ಲಿ ವಿದ್ಯಾರ್ಥಿಗಳು ಅನುತ್ತೀರ್ಣರಾಗಲು ಕಾರಣವಾಗುತ್ತದೆ. ಈ ಸಮಸ್ಯೆಯನ್ನು ಇತ್ಯರ್ಥಪಡಿಸಬೇಕು ಎಂದು ಮನವಿ ಮಾಡಿದೆ.</p>.<p>ಮುಖ್ಯಮಂತ್ರಿಗೆ ಬರೆದ ಮನವಿಪತ್ರವನ್ನು ಎಸ್ಎಫ್ಐ ಜಿಲ್ಲಾ ಘಟಕದ ಅಧ್ಯಕ್ಷ ಅರುಣ ಕೊಡಗೆ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು. ಉಪಾಧ್ಯಕ್ಷ ಅಮರ್ ಗಾದಗಿ, ಕಾರ್ಯದರ್ಶಿ ಅವಿನಾಶ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>