<p><strong>ಬೀದರ್:</strong> ಗೊಂಡ ಹಾಗೂ ಆದಿವಾಸಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡಬೇಕು ಎಂದು ಆಗ್ರಹಿಸಿ ಗೊಂಡ ಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಸದಸ್ಯರು ಶುಕ್ರವಾರ ಧರಣಿ ನಡೆಸಿದರು.</p>.<p>2011ರ ಜನಗಣತಿ ಪ್ರಕಾರ ದೇಶದಲ್ಲಿ ಗೊಂಡ ಸಮಾಜದ ಜನಸಂಖ್ಯೆ 2.50 ಕೋಟಿ ಇದೆ. ಗೊಂಡ ಸಮಾಜಕ್ಕೆ 2021ರ ಜನಗಣತಿಯಲ್ಲಿ ಪ್ರತ್ಯೇಕ ಕಾಲಂನಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ರಾಜ್ಯದಲ್ಲಿರುವ ಗೊಂಡ ಹಾಗೂ ಕುರುಬ ಜನಾಂಗದವರು ಒಂದೇ ಸಮುದಾಯಕ್ಕೆ ಸೇರಿದವರು. ಗೊಂಡ ಬುಡಕಟ್ಟಿನ ಪರ್ಯಾಯ ಪದವೇ ಕುರುಬ. ರಾಜ್ಯ ಸರ್ಕಾರ ಈಗಾಗಲೇ ಒಪ್ಪಿಗೆ ಸೂಚಿಸಿ ಕೇಂದ್ರಕ್ಕೆ ವರದಿ ಕಳಿಸಿದೆ. ಕೇಂದ್ರ ಸರ್ಕಾರ ವರದಿಗೆ ಅನುಮೋದನೆ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಾರ್ಷಿಕ ಆದಾಯದ ಮಿತಿ ಕೇವಲ ₹ 2.50 ಲಕ್ಷ ಇದೆ. ಈ ಆದಾಯ ಮಿತಿಯನ್ನು ತಕ್ಷಣ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಅನಿಲ್ ಬೆಲ್ದಾರ್, ಅಮೃತರಾವ್ ಚಿಮಕೋಡ, ಗೋವರ್ಧನ್ ರಾಠೋಡ್, ಲತಾ ರಾಠೋಡ್, ಮಾಣಿಕ ಬರೀದಾಬಾದ್, ಆನಂದ ದೇವಪ್ಪ, ಅಬ್ದುಲ್ ಮನ್ನಾನ್ ಶೇಠ್, ಮಾಳಪ್ಪ ಅಡಸಾರೆ, ಗೋಪಾಲ ಲದ್ದೆ, ಲೋಕೇಶ ಮೇತ್ರೆ, ದತ್ತು ಕಾಡವಾದ, ಮೋಹನ್ ಡಾಂಗೆ, ಶಿವಕುಮಾರ ನೀಲಕಟ್ಟೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಗೊಂಡ ಹಾಗೂ ಆದಿವಾಸಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡಬೇಕು ಎಂದು ಆಗ್ರಹಿಸಿ ಗೊಂಡ ಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಸದಸ್ಯರು ಶುಕ್ರವಾರ ಧರಣಿ ನಡೆಸಿದರು.</p>.<p>2011ರ ಜನಗಣತಿ ಪ್ರಕಾರ ದೇಶದಲ್ಲಿ ಗೊಂಡ ಸಮಾಜದ ಜನಸಂಖ್ಯೆ 2.50 ಕೋಟಿ ಇದೆ. ಗೊಂಡ ಸಮಾಜಕ್ಕೆ 2021ರ ಜನಗಣತಿಯಲ್ಲಿ ಪ್ರತ್ಯೇಕ ಕಾಲಂನಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ರಾಜ್ಯದಲ್ಲಿರುವ ಗೊಂಡ ಹಾಗೂ ಕುರುಬ ಜನಾಂಗದವರು ಒಂದೇ ಸಮುದಾಯಕ್ಕೆ ಸೇರಿದವರು. ಗೊಂಡ ಬುಡಕಟ್ಟಿನ ಪರ್ಯಾಯ ಪದವೇ ಕುರುಬ. ರಾಜ್ಯ ಸರ್ಕಾರ ಈಗಾಗಲೇ ಒಪ್ಪಿಗೆ ಸೂಚಿಸಿ ಕೇಂದ್ರಕ್ಕೆ ವರದಿ ಕಳಿಸಿದೆ. ಕೇಂದ್ರ ಸರ್ಕಾರ ವರದಿಗೆ ಅನುಮೋದನೆ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಾರ್ಷಿಕ ಆದಾಯದ ಮಿತಿ ಕೇವಲ ₹ 2.50 ಲಕ್ಷ ಇದೆ. ಈ ಆದಾಯ ಮಿತಿಯನ್ನು ತಕ್ಷಣ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಅನಿಲ್ ಬೆಲ್ದಾರ್, ಅಮೃತರಾವ್ ಚಿಮಕೋಡ, ಗೋವರ್ಧನ್ ರಾಠೋಡ್, ಲತಾ ರಾಠೋಡ್, ಮಾಣಿಕ ಬರೀದಾಬಾದ್, ಆನಂದ ದೇವಪ್ಪ, ಅಬ್ದುಲ್ ಮನ್ನಾನ್ ಶೇಠ್, ಮಾಳಪ್ಪ ಅಡಸಾರೆ, ಗೋಪಾಲ ಲದ್ದೆ, ಲೋಕೇಶ ಮೇತ್ರೆ, ದತ್ತು ಕಾಡವಾದ, ಮೋಹನ್ ಡಾಂಗೆ, ಶಿವಕುಮಾರ ನೀಲಕಟ್ಟೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>