‘ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿಸಲು ಕೇಂದ್ರ ಸರ್ಕಾರ ಗರಿಷ್ಠ ₹23,250 ಮೆಟ್ರಿಕ್ ಟನ್ ಪ್ರಮಾಣ ಹಾಗೂ 90 ದಿನಗಳ ಕಾಲಾವಕಾಶ ನೀಡಿತ್ತು. ಈಗಾಗಲೇ ಶೇಕಡ 90ರಷ್ಟು ಖರೀದಿ ಮಾಡಲಾಗಿದೆ. ಹೆಚ್ಚುವರಿ ಕಾಲಾವಕಾಶಕ್ಕಾಗಿ ಕೇಂದ್ರ ಸಚಿವ ಸಂಪುಟದ ಉಪ ಸಮಿತಿ ಅಧ್ಯಕ್ಷರಾಗಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರಿಗೆ ಪತ್ರ ಬರೆಯಲಾಗುವುದು. ನವೆಂಬರ್ 2 ರಂದು ದೆಹಲಿಗೆ ತೆರಳಿ, ಮನವಿ ಮಾಡಲಾಗುವುದು’ ಎಂದು ತಿಳಿಸಿದ್ದಾರೆ.