<p><strong>ಬೀದರ್:</strong> ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಸೋಯಾ ಅವರೆ ಬೆಳೆ ಸುಟ್ಟು ಕರಕಲಾಗಿರುವ ಘಟನೆ ತಾಲ್ಲೂಕಿನ ಅಮದಲ್ಪಾಡ್ ಗ್ರಾಮದಲ್ಲಿ ನಡೆದಿದೆ.</p>.<p>ಕಾಶಿನಾಥ ಹೈಬತಿ ಎಂಬ ರೈತನಿಗೆ ಸೇರಿದ ಜಮೀನಿನಲ್ಲಿ ಗುರುವಾರ ಈ ಘಟನೆ ನಡೆದಿದೆ. ಮಳೆಯಿಂದ ಉಳಿದಿದ್ದ ಬೆಳೆಯನ್ನು ಕಿಡಿಗೇಡಿಗಳು ಬೆಂಕಿ ಹಚ್ಚು ಹಾಳುಗೆಡವಿದ್ದಾರೆ ಎಂದು ಕಾಶಿನಾಥ ಆರೋಪಿಸಿದ್ದಾರೆ.</p>.<p>ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಸೋಯಾ ಮಳೆಯಿಂದ ಸ್ವಲ್ಪ ಹಾನಿಯಾಗಿತ್ತು. ಮಿಕ್ಕುಳಿದ ಮಾಲೂ ಹೊಲದಲ್ಲಿ ಕಟಾವು ಮಾಡಿ ಇರಿಸಿದ್ದೆ. ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿ ನಾಶಪಡಿಸಿದ್ದಾರೆ. ₹50 ಸಾವಿರ ಮೌಲ್ಯದ ಬೆಳೆ ಬೆಂಕಿಗೆ ಆಹುತಿಯಾಗಿದೆ. ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ನಷ್ಟಕ್ಕೆ ಸರ್ಕಾರ ಪರಿಹಾರ ಕೊಟ್ಟು ನೆರವಿಗೆ ಬರಬೇಕೆಂದು ಕಾಶಿನಾಥ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಸೋಯಾ ಅವರೆ ಬೆಳೆ ಸುಟ್ಟು ಕರಕಲಾಗಿರುವ ಘಟನೆ ತಾಲ್ಲೂಕಿನ ಅಮದಲ್ಪಾಡ್ ಗ್ರಾಮದಲ್ಲಿ ನಡೆದಿದೆ.</p>.<p>ಕಾಶಿನಾಥ ಹೈಬತಿ ಎಂಬ ರೈತನಿಗೆ ಸೇರಿದ ಜಮೀನಿನಲ್ಲಿ ಗುರುವಾರ ಈ ಘಟನೆ ನಡೆದಿದೆ. ಮಳೆಯಿಂದ ಉಳಿದಿದ್ದ ಬೆಳೆಯನ್ನು ಕಿಡಿಗೇಡಿಗಳು ಬೆಂಕಿ ಹಚ್ಚು ಹಾಳುಗೆಡವಿದ್ದಾರೆ ಎಂದು ಕಾಶಿನಾಥ ಆರೋಪಿಸಿದ್ದಾರೆ.</p>.<p>ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಸೋಯಾ ಮಳೆಯಿಂದ ಸ್ವಲ್ಪ ಹಾನಿಯಾಗಿತ್ತು. ಮಿಕ್ಕುಳಿದ ಮಾಲೂ ಹೊಲದಲ್ಲಿ ಕಟಾವು ಮಾಡಿ ಇರಿಸಿದ್ದೆ. ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿ ನಾಶಪಡಿಸಿದ್ದಾರೆ. ₹50 ಸಾವಿರ ಮೌಲ್ಯದ ಬೆಳೆ ಬೆಂಕಿಗೆ ಆಹುತಿಯಾಗಿದೆ. ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ನಷ್ಟಕ್ಕೆ ಸರ್ಕಾರ ಪರಿಹಾರ ಕೊಟ್ಟು ನೆರವಿಗೆ ಬರಬೇಕೆಂದು ಕಾಶಿನಾಥ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>