ಅಭ್ಯರ್ಥಿಗಳು, ಆಯಾ ಪಕ್ಷಗಳ ಏಜೆಂಟರನ್ನು ಹೊರತುಪಡಿಸಿ ಶಾಸಕ, ಸಚಿವರಿಗೆ ಮತ ಎಣಿಕೆ ಕೇಂದ್ರದೊಳಗೆ ಪ್ರವೇಶ ಇರಲಿಲ್ಲ. ಹೀಗಾಗಿಯೇ ಸಚಿವರಾದ ಈಶ್ವರ ಬಿ. ಖಂಡ್ರೆ, ರಹೀಂ ಖಾನ್ ಅವರು ಮತ ಎಣಿಕೆ ಮುಗಿದು, ಫಲಿತಾಂಶ ಘೋಷಿಸಿದ ಬಳಿಕವಷ್ಟೇ ಅಲ್ಲಿಗೆ ಬಂದಿದ್ದರು. ಆದರೆ, ಇನ್ಸ್ಪೆಕ್ಟರ್ಗಳ ಕರ್ತವ್ಯ ಲೋಪದಿಂದ ಶಾಸಕ ಶರಣು ಸಲಗರ್ ಅವರು ಕೇಂದ್ರದೊಳಗೆ ಪ್ರವೇಶಿಸಿದ್ದರು. ಇದನ್ನು ಎಸ್ಪಿ ಗಂಭೀರವಾಗಿ ತೆಗೆದುಕೊಂಡು ಕ್ರಮಕ್ಕೆ ಶಿಫಾರಸು ಮಾಡಿದ್ದಾರೆ.